ಡೆತ್‍ನೋಟ್ ಬರೆದಿಟ್ಟು ಎಂಜಿನಿಯರ್ ಆತ್ಮಹತ್ಯೆ

ಮಂಡ್ಯ: ಡೆತ್‍ನೋಟ್ ಬರೆದಿಟ್ಟು ರೈಲಿಗೆ ತಲೆ ಕೊಟ್ಟು ಎಂಜಿನಿಯರ್‍ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪಾಂಡವಪುರದಲ್ಲಿ ನಡೆದಿದೆ.

ಇಂದು ಬೆಳಗ್ಗಿನ ಜಾವದಲ್ಲಿ ಈ ಘಟನೆ ಸಂಭವಿಸಿದೆ. ಹಾರೋಹಳ್ಳಿ ಗ್ರಾಮದ ನಿವಾಸಿ ಎಚ್.ಪಿ.ರಾಜು ಗೌಡ(28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿ ರಾಜು ಗೌಡ ಕೆಲಸ ಮಾಡುತ್ತಿದ್ದರು.

ನನ್ನ ಸಾವಿಗೆ ನಾನೇ ಕಾರಣ ಮತ್ತು ನನ್ನ ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಡೆತ್‍ನೋಟ್ ಬರೆದಿಟ್ಟು ಪಾಂಡವಪುರದಿಂದ 1.5 ಕಿಮೀ ದೂರದಲ್ಲಿರುವ ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನ ಶವ ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಸ್ಪತ್ರೆಗೆ ಸಂಸದ ಸಿ.ಎಸ್.ಪುಟ್ಟರಾಜು, ಶಾಸಕ ಪುಟ್ಟಣ್ಣಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಡ್ಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಡೆತ್‍ನೋಟ್ ವಶಪಡಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

Comments

Leave a Reply

Your email address will not be published. Required fields are marked *