ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಸ್ಪೋಟ- ಓರ್ವ ದುರ್ಮರಣ

ತಿರುವನಂತಪುರಂ: ಕೇರಳದ ಎರ್ನಾಕುಲಂನ (Ernakulam, Kerala) ಕಲಮಶ್ಶೇರಿಯಲ್ಲಿ‌ (Kalamassery) ಬಾಂಬ್ ಸ್ಫೋಟವೊಂದು ನಡೆದಿದ್ದು, ಓರ್ವ ದುರ್ಮರಣಕ್ಕೀಡಾಗಿದ್ದಾರೆ.

ಮೂರು ಪ್ರಬಲ  ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ. ಇದನ್ನೂ ಓದಿ: ವೃದ್ಧ ತಾಯಿ ಮೇಲೆ ಮನಬಂದಂತೆ ಥಳಿಸಿದ ವಕೀಲ – ಪಾಪಿ ಮಗ ಅಂದರ್

ಭಾನುವಾರದ ಪ್ರೇಯರ್ ಗಾಗಿ ಸುಮಾರು 2,500 ಮಂದಿ ಸೇರಿದ್ದರು. ಈ ವೇಳೆ ಪ್ರೇಯರ್ ಹಾಲ್ ನಲ್ಲಿ ಭಾರೀ ಸ್ಪೋಟಗೊಂಡಿದೆ. ಘಟನೆಯಿಂದ ಗಾಬರಿಗೊಂಡು ಜನ ದಿಕ್ಕಾಪಾಲಾಗಿದ್ದರು. ಪ್ರಾರ್ಥನಾ ಮಂದಿರವನ್ನೇ ಗುರಿಯಾಗಿಸಿಕೊಂಡು  ಹಾಗೂ ಸ್ಫೋಟದ ಹಿಂದೆ ಭಯೋತ್ಪಾದಕ ಕೃತ್ಯ ಶಂಕೆ ಇದೆ.

ಈ ಸಂಬಂಧ ಕೇರಳ ಮುಖ್ಯಮಂತ್ರಿ ಪ್ರತಿಕ್ರಿಯಿಸಿ, ಕಲಮಶ್ಯೆರಿಯಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದ ವೇಳೆ ಸಂಭವಿಸಿದ ಸ್ಫೋಟ ದುರದೃಷ್ಟಕರ. ಸ್ಫೋಟದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಎಲ್ಲ ಅಂಶಗಳನ್ನು ಪರಿಶೀಲಿಸಲಾಗುವುದು ಎಂದಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]