ಇಂದು ಪ್ರಕಟವಾಗಲಿದೆ ಡಿಕೆಶಿ ಜಾಮೀನು ಅರ್ಜಿಯ ಭವಿಷ್ಯ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಮಧ್ಯಾಹ್ನ 2.30ಕ್ಕೆ ದೆಹಲಿ ಹೈಕೋರ್ಟ್‍ನ ನ್ಯಾ.ಸುರೇಶ್ ಕುಮಾರ್ ಕೈಟ್ ತೀರ್ಪು ಪ್ರಕಟಿಸಲಿದ್ದಾರೆ.

ಪಿಎಂಎಲ್‍ಎ ಕೇಸ್ ಅಡಿ ಇ.ಡಿಯಿಂದ ತಿಹಾರ್ ಜೈಲಿನಲ್ಲಿ ಡಿಕೆಶಿ, ಕಳೆದ ಒಂದೂವರೆ ತಿಂಗಳಿಂದ ಜೈಲಿನಲ್ಲಿದ್ದು ಕೋರ್ಟ್ ಇಂದಿಗೆ ಆದೇಶ ಕಾಯ್ದಿರಿಸಿದೆ.

ಡಿಕೆಶಿ ಪರ ವಾದ ಮಂಡಿಸಿದ ಅಭಿಷೇಕ್ ಮನುಸಿಂಘ್ವಿ ಅವರು, ಈಗಾಗಲೇ 45 ದಿನಗಳಿಂದ ಡಿಕೆ ಶಿವಕುಮಾರ್ ಅವರು ಬಂಧನದಲ್ಲಿದ್ದಾರೆ. ಬಹುತೇಕ ವಿಚಾರಣೆಯ ಮುಗಿದರು ಅನಾವಶ್ಯಕವಾಗಿ ವಶದಲ್ಲಿಟ್ಟುಕೊಳ್ಳಲಾಗಿದೆ. ಐಟಿ ದಾಖಲಿಸಿದ್ದ ಕೇಸ್ ನಲ್ಲಿ ಇಡಿ ವಿಚಾರಣೆ ನಡೆಸುತ್ತಿದ್ದು ಸ್ವಯಂ ಘೋಷಿತ ಆಸ್ತಿ ಮೇಲೆ ವಿಚಾರ ನಡೆಸುತ್ತಿದೆ ಹೊರತು ಯಾವುದೇ ಹೊಸ ಅಂಶಗಳನ್ನು ಬಯಲು ಮಾಡಿಲ್ಲ ಎಂದು ವಾದಿಸಿದ್ದರು. ಆದರೆ, ಪ್ರತಿವಾದ ಮಂಡಿಸಿದ್ದ ಇಡಿ ಪರ ವಕೀಲರು, 300ಕ್ಕೂ ಹೆಚ್ಚು ಆಸ್ತಿಗಳನ್ನು ಡಿಕೆಶಿ ಹೊಂದಿದ್ದು ಇದರ ಮೂಲ ನೀಡುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ಬೇಲ್ ಕೊಡಬಾರದು, ಬೇಲ್ ನೀಡಿದರೆ ಸಾಕ್ಷಿನಾಶ ಆಗುತ್ತೆ ಎಂದು ವಾದ ಮಂಡಿಸಿದ್ದರು.

ಇತ್ತ ಅ.24ಕ್ಕೆ ತಾಯಿ ಗೌರಮ್ಮ, ಪತ್ನಿ ಉಷಾ ಅವರ ಸಮನ್ಸ್ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ದೆಹಲಿ ಹೈಕೋರ್ಟಿನಲ್ಲಿ ನಡೆಯಲಿದೆ.

Comments

Leave a Reply

Your email address will not be published. Required fields are marked *