ಜನರ ಗುಂಪಿನ ಮೇಲೆ ಚಿರತೆ ದಾಳಿ-ಇತ್ತ ನಗರದತ್ತ ಬಂದ ಗಜಪಡೆ

ಆನೇಕಲ್: ಗುಂಪು ಗುಂಪಾಗಿ ಚಿರತೆ ಸೆರೆ ಹಿಡಿಯುವುದನ್ನು ನೋಡಲು ತೆರಳಿದ್ದ ಸಾರ್ವಜನಿಕರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಕರ್ನಾಟಕ ಮತ್ತು ತಮಿಳುನಾಡು ಗಡಿಭಾಗದ ವಾನಂಬಾಡಿಯಲ್ಲಿ ನಡೆದಿದೆ.

ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಬೋನು ಸಿದ್ಧಪಡಿಸಿ ಮಾಂಸದ ತುಂಡಿನ ಸಮೇತ ಚಿರತೆ ಪ್ರತ್ಯಕ್ಷವಾದ ಸ್ಥಳಕ್ಕೆ ತಂದಿತ್ತು. ಈ ವೇಳೆ ಸುತ್ತಮುತ್ತಲಿನ ಗ್ರಾಮಾಸ್ಥರು ಸೇರಿದಂತೆ ಸಾರ್ವಜನಿಕರು ಸಾಕಷ್ಟು ಸಂಖ್ಯೆಯಲ್ಲಿ ಸ್ಥಳದಲ್ಲಿ ಸೇರಿದ್ದರು. ಆದರೆ ಜನರ ಗಲಾಟೆಗೆ ಭಯಗೊಂಡ ಚಿರತೆ ಗುಂಪಿನ ಮೇಲೆ ಏಕಾಏಕಿ ದಾಳಿ ಮಾಡಿದೆ. ಈ ವೇಳೆ ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳು ಜನರು ಯತ್ನಿಸಿ ದಿಕ್ಕಾಪಲಾಗಿ ಓಡಿದ್ದಾರೆ.

ಚಿರತೆ ಜನರ ಮೇಲೆ ದಾಳಿ ನಡೆಸುತ್ತಿರುವ ವಿಡಿಯೋ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಜನರನ್ನು ಬೆನ್ನಟ್ಟಿ ಚಿರತೆ ದಾಳಿ ನಡೆಸುತ್ತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದಾಗಿದೆ. ಈ ವೇಳೆ ಸ್ಥಳದಲ್ಲೇ ಅರಣ್ಯ ಸಿಬ್ಬಂದಿ ಕೂಡ ಇದ್ದು, ಜನರ ಮೇಲೆ ದಾಳಿ ನಡೆಸಿದ ಚಿರತೆ ಕ್ಷಣ ಮಾತ್ರದಲ್ಲಿ ತಪ್ಪಿಸಿಕೊಂಡು ಕಾಡಿನತ್ತ ಓಡಿ ಹೋಗಿದೆ.

ಒಂದೆಡೆ ಚಿರತೆ ದಾಳಿ ನಡೆದಿದ್ದರೆ, ಇತ್ತ ಕರ್ನಾಟಕ, ತಮಿಳುನಾಡಿನ ಗಡಿ ಭಾಗದಲ್ಲಿ ಮತ್ತೆ ಆನೆಗಳ ಹಿಂಡು ಪ್ರತ್ಯಕ್ಷವಾಗಿದೆ. ಹೊಸೂರು ಬಳಿಯ ಉದ್ದನಾಪಲ್ಲಿ, ತೊಪಗಾನಪಲ್ಲಿ ಗ್ರಾಮಗಳ ಬಳಿ ಕಾಡಾನೆಗಳು ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿದೆ. ಕಳೆದೆರೆಡು ತಿಂಗಳಿನಿಂದ ಗಡಿ ಭಾಗದಲ್ಲಿ ಆನೆಗಳ ಹಾವಳಿ ಹೆಚ್ಚುತ್ತಿದ್ದು ಆನೆಗಳನ್ನು ಕಾಡಿಗಟ್ಟಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

https://www.youtube.com/watch?v=EkvtvjmHVis

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *