ಭೂತ ಬಿಡಿಸುವ ನೆಪದಲ್ಲಿ 14ರ ಬಾಲಕಿಯ ಮೇಲೆ ಅತ್ಯಾಚಾರ

ಲಕ್ನೋ: ಭೂತ ಬಿಡಿಸುವ ನೆಪದಲ್ಲಿ ಮಂತ್ರವಾದಿಯೊಬ್ಬ (Exorcist) 14 ವರ್ಷದ ಬಾಲಕಿಯ (Girl) ಮೇಲೆ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅಶೋಕ್ ಕುಮಾರ್ (45) ಬಂಧಿತ (Arrest) ವ್ಯಕ್ತಿ. ಉತ್ತರ ಪ್ರದೇಶದ ಪಿಪ್ರಿ ಪೊಲೀಸ್ ಠಾಣೆಯ ವ್ಯಾಪ್ತಿ ನಿವಾಸಿಯೊಬ್ಬಳು ಕಳೆದ ಮೂರು ವರ್ಷಗಳಿಂದ ಮೂರ್ಛೆ ರೋಗದಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಬಾಲಕಿಯ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿರಲಿಲ್ಲ.

ಈ ಹಿನ್ನೆಲೆಯಲ್ಲಿ ಬಾಲಕಿಯ ತಾಯಿಯ ಬಳಿಗೆ ಬಂದ ಅಶೋಕ್ ಕುಮಾರ್ ಬಾಲಕಿಗೆ ದೆವ್ವ ಹಿಡಿದಿದೆ. ಇದರಿಂದಾಗಿ ಪದೇ ಪದೇ ಪ್ರಜ್ಞೆ ತಪ್ಪಿ ಬೀಳುತ್ತಿದ್ದಾಳೆ. ಈ ಹಿನ್ನೆಲೆಯಲ್ಲಿ ತನ್ನ ಬಳಿಗೆ ಕಳುಹಿಸಿಕೊಡಿ, ನಾನು ಆ ರೋಗವನ್ನು ಸರಿಪಡಿಸುತ್ತೇನೆ ಎಂದು ಭರವಸೆ ಹುಟ್ಟಿಸಿದ್ದಾನೆ. ಈ ಮಾತನ್ನೇ ನಿಜವೆಂದು ತಿಳಿದ ಬಾಲಕಿಯ ತಾಯಿಯು ತನ್ನ ಮಗಳನ್ನು ಮಂತ್ರವಾದಿಯ ಬಳಿ ಕಳುಹಿಸಿದ್ದಾರೆ. ಇದನ್ನೂ ಓದಿ: ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್ ರೈಲಿನ 8 ಬೋಗಿಗಳು!

ಇದಾದ ಬಳಿಕ ಅಶೋಕ್ ಕುಮಾರ್ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಘಟನೆಗೆ ಸಂಬಂಧಿಸಿ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪೋಕ್ಸೋ ಕಾಯ್ದೆಯಡಿಯಯಲ್ಲಿ ಅಶೋಕ್‍ ಕುಮಾರ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಮಹಿಳೆ ಶವವಾಗಿ ಪತ್ತೆ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *