ಕಲಬುರಗಿಯಲ್ಲಿ ಸಿಕ್ತು ಹನುಮಂತನಿಗೆ ಭರ್ಜರಿ ಸ್ವಾಗತ

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಇಂದು ಸಂತ ಸೇವಾಲಾಲ ಜಯಂತಿಯನ್ನು ಅದ್ಧೂರಿಯಾಗಿ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಸರಿಗಮಪ ಸೀಸನ್ 15ರ ರನ್ನರಪ್ ಹನುಮಂತ ಹಾಗೂ ಸೀಸನ್ 13ರ ಚಾಂಪಿಯನ್ ಸುನಿಲ್ ಗುಜಗುಂಡ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಸ್ವಾಗತಿಸಿದರು.

ಈ ಕಾರ್ಯಕ್ರಮಕ್ಕೆ ಹನುಮಂತ ಅವರೇ ಕೇಂದ್ರ ಬಿಂದುವಾಗಿದ್ದರು. ಹನುಮಂತ ಅವರನ್ನು ಪ್ರೀತಿಯಿಂದ ಅಭಿಮಾನಿಗಳು ಯಡ್ರಾಮಿ ಪಟ್ಟಣದ ಪ್ರಮುಖ ವೃತಗಳಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಕರೆತಂದು ಗೌರವಿಸಿದರು. ಈ ಸಂದರ್ಭದಲ್ಲಿ ಸರಿಗಮಪ ಸೀಸನ್ 13ರಲ್ಲಿ ಚಾಂಪಿಯನ್ ಆಗಿದ್ದ ಸುನೀಲ್ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವೇದಿಕೆಗೆ ಬರುತ್ತಿದ್ದಂತೆ ಮೈಕ್ ಹಿಡಿದ ಹನುಮಂತ ಅವರು ಹಾಡು ಹಾಡಿ ಜನರ ಮನಸ್ಸು ಗೆದ್ದಿದ್ದಾರೆ. ಇನ್ನು ಹನುಮಂತ ಸಹ ಬಂಜಾರಾ ಸಮುದಾಯದ ಜನಾಂಗಕ್ಕೆ ಸೇರಿದ್ದು, ಲಂಬಾಣಿ ಭಾಷೆಯಲ್ಲಿ ಸಹ ಹಾಡು ಹಾಡಿ ಜನರನ್ನು ರಂಜಿಸಿದ್ದಾರೆ. ಅದಾದ ಬಳಿಕ ಸುನೀಲ್ ಹನುಮಂತ ಅವರಿಗೆ ಸಾಥ್ ನೀಡಿದ್ದು, ಇಬ್ಬರ ಹಾಡಿಗೆ ನೆರೆದ ಜನ ವಿಸಿಲ್ ಹಾಕಿ ಭರಪೂರ ಎಂಜಾಯ್ ಮಾಡಿದ್ದಾರೆ.

ಬಂಜಾರಾ ಸಮುದಾಯದ ವತಿಯಿಂದ ಹನುಮಂತ ಹಾಗು ಸುನೀಲ್ ಅವರನ್ನು ಶಾಲು ಹೊದಿಸಿ ಸಮುದಾಯದ ಮುಖಂಡರು ಸನ್ಮಾನಿಸಿ ಗೌರವಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *