ಸಾಲ ನವೀಕರಣ ಮಾಡದ್ದಕ್ಕೆ ಬ್ಯಾಂಕ್‍ನಲ್ಲೇ ಕ್ರಿಮಿನಾಶಕ ಕುಡಿದ ರೈತ

ರಾಯಚೂರು: ಸಾಲ ನೀಡಲು ಬ್ಯಾಂಕ್ ಸಿಬ್ಬಂದಿ ನಿರಾಕರಿಸಿದ್ದಕ್ಕೆ ಬ್ಯಾಂಕ್ ನಲ್ಲಿಯೇ ಕ್ರಿಮಿನಾಶಕ ಕುಡಿದು ರೈತ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಗ್ರಾಮದ ಎಸ್‍ಬಿಐ ಬ್ಯಾಂಕ್ ನಲ್ಲಿ ಘಟನೆ ನಡೆದಿದ್ದು, ಸಾಲದ ಹಣ ತುಂಬಿದ್ದರೂ ಸಾಲ ನವೀಕರಣ ಮಾಡಲು ಬ್ಯಾಂಕ್ ಸಿಬ್ಬಂದಿ ನಿರಾಕರಿಸಿದ್ದಾರೆ. ಮನನೊಂದ ತಾಲೂಕಿನ ಹಾಲಾಪುರ ಗ್ರಾಮದ ರೈತ ಹುಲಗಪ್ಪ ಅವರು ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಮ್ಮ ಸಾವಿಗೆ ಮಧ್ಯವರ್ತಿಗಳ ಹಾವಳಿ ಮತ್ತು ಬ್ಯಾಂಕಿನ ದಿನಗೂಲಿ ನೌಕರ ಹಾಗೂ ಮ್ಯಾನೇಜರ್ ಕಾರಣವೆಂದು ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ನಂತರ ರೈತ ಹುಲಗಪ್ಪ ಅವರನ್ನು ತಡೆದಿದ್ದು, ತಕ್ಷಣವೇ ಕವಿತಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕವಿತಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments

Leave a Reply

Your email address will not be published. Required fields are marked *