ಮಗುವನ್ನು ನೋಡಲು ಬಿಡದ್ದಕ್ಕೆ ಬೆಂಕಿ ಹಚ್ಚಿಕೊಂಡಿದ್ದ ತಂದೆ ಸಾವು

ಬೆಂಗಳೂರು: ಮಗುವನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ನಿವಾಸದ ಬಳಿ ಬೆಂಕಿ ಹಚ್ಚಿಕೊಂಡಿದ್ದ ತಂದೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ಯುವರಾಜನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ದೆಹಲಿಯಲ್ಲಿ ಬುಲ್ಡೋಜರ್‌ ಕಾರ್ಯಾಚರಣೆಗೆ ಸುಪ್ರೀಂ ಬ್ರೇಕ್‌

ನಡೆದಿದ್ದು ಏನು?
5 ವರ್ಷದ ಹಿಂದೆ ಯುವರಾಜ, ಶ್ವೇತಾ ಪ್ರೀತಿಸಿ ಮದುವೆಯಾಗಿದ್ದರು. ಯುವರಾಜನಿಗೆ ದುಶ್ಚಟ ಇದ್ದಿದ್ದರಿಂದ ತನ್ನ ಮಗುವಿನ ಜೊತೆ ಶ್ವೇತಾ ತವರು ಮನೆಗೆ ತೆರಳಿದ್ದರು. ಇದನ್ನೂ ಓದಿ: ಜನರಲ್ ಚೆಕಪ್ ಗಾಗಿ ಆಸ್ಪತ್ರೆಗೆ ಹೋಗಿದ್ದಾರೆ ನಟ ಶಿವಣ್ಣ : ಗಾಳಿ ಸುದ್ದಿಗೆ ಕಿವಿಗೊಡಬೇಡಿ

ಖಾಸಗಿ ಪತ್ರಿಕೆಯೊಂದರಲ್ಲಿ ಕೆಲಸಮಾಡಿಕೊಂಡಿದ್ದ ಯುವರಾಜ ದಾವಣಗೆರೆಯಿಂದ ಬೆಂಗಳೂರಿಗೆ ಮಗುವನ್ನ ನೋಡಲು ಏ.15 ರಂದು ಬಂದಿದ್ದ, ಆದರೆ ಮಗುವನ್ನು ನೋಡಲು ಶ್ವೇತ ಬಿಟ್ಟಿರಲಿಲ್ಲ. ಮಗುವನ್ನ ನೋಡಲು ಪತ್ನಿ ಶ್ವೇತಾ ಬಿಡದ್ದಕ್ಕೆ ಯುವರಾಜ ಚಾಮುಂಡೇಶ್ವರಿ ನಗರದಲ್ಲಿರುವ ಪತ್ನಿ ನಿವಾಸದ ಬಳಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ಶೇ. 50% ರಷ್ಟು ದೇಹ ಸುಟ್ಟಿದ್ದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *