ನಡು ರಸ್ತೆಯಲ್ಲಿಯೇ ಬಡಿದಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು!

ಗದಗ: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಬಡಿದಾಡಿಕೊಂಡಿರುವ ಘಟನೆ ನಗರದ ಒಕ್ಕಲಗೇರಿ ಓಣಿಯಲ್ಲಿ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರಾದ ವಿನಾಯಕ ಜಂತ್ಲಿ, ಪ್ರಕಾಶ ಜಂತ್ಲಿ, ಶಿವು ಜಂತ್ಲಿ, ಸಂತೋಷ ಶಟ್ಟಿಕೇರಿ ಮತ್ತು ಬಿಜೆಪಿ ಕಾರ್ಯಕರ್ತರಾದ ಶರಣಪ್ಪ ಮತ್ತು ಹಾಗೂ ಮಂಜು ಹೊಡೆದಾಡಿಕೊಂಡಿದ್ದಾರೆ

ಮತದಾನದಂದು ಸಂಜೆ ಮತಗಟ್ಟೆಗೆ ಬಿಜೆಪಿ ಕಾರ್ಯಕರ್ತರಾದ ಶರಣಪ್ಪ ಮತ್ತು ಮಂಜು ಹೋಗಿದ್ದರು. ಆದರೆ ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರಾದ ವಿನಾಯಕ ಜಂತ್ಲಿ ಮತ್ತು ಪ್ರಕಾಶ ಜಂತ್ಲಿ ಸಮಯ ಮೀರಿದೆ ಅಂತ ವಾದಿಸಿದ್ದರು. ಈ ವೇಳೆ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿತ್ತು. ಇದೇ ದ್ವೇಷ ಭಾನುವಾರವೂ ಮುಂದುವರೆದು ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಓಣಿಯಲ್ಲಿ ಹೊಡೆದಾಡಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಘಟನೆ ಗದಗನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Comments

Leave a Reply

Your email address will not be published. Required fields are marked *