ಮಂಡ್ಯದಲ್ಲಿ ಹೊಡಿ ಬಡಿ ಪಾಲಿಟಿಕ್ಸ್- ಜೆಡಿಎಸ್‍ನ ಮೂವರು ಆಸ್ಪತ್ರೆ ಪಾಲು!

ಮಂಡ್ಯ: ಸಾವಿನ ರಾಜಕೀಯ, ಮಾತಿನ ರಾಜಕೀಯ ಆಯ್ತು ಇದೀಗ ಮಂಡ್ಯದಲ್ಲಿ ದ್ವೇಷದ ರಾಜಕೀಯ ಆರಂಭವಾಗಿದೆ.

ಮದ್ದೂರು ತಾಲೂಕಿನ ಗುರುದೇವರಹಳ್ಳಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದೆ. ಸುಮಲತಾ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದು, ಹೊಡಿ ಬಡಿ ಪಾಲಿಟಿಕ್ಸ್ ಗೆ ಜೆಡಿಎಸ್‍ನ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜೆಡಿಎಸ್‍ನ ಕಾರ್ತಿಕ್, ಅನಿಲ್, ಪಾಪಣ್ಣ ಮೇಲೆ ಸುಮಲತಾ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಭಾನುವಾರ ರಾತ್ರಿ ಕೆಎಂ ದೊಡ್ಡಿ ಆಸ್ಪತ್ರೆಗೆ ನಿಖಿಲ್ ಭೇಟಿ ನೀಡಿದ್ದಾರೆ. ಈ ರೀತಿ ಗಲಾಟೆ ಮಾಡಿದ್ರೆ ನಾನು ಸುಮ್ಮನೆ ಕೂರಲ್ಲ ಎಂದು ನಿಖಿಲ್ ಗರಂ ಆಗಿದ್ದಾರೆ ಎನ್ನಲಾಗಿದೆ.

ಇತ್ತ ನಂಗೇನೂ ಗೊತ್ತಿಲ್ಲ. ಆದರೆ ಜೆಡಿಎಸ್ ನವರ ರೌಡಿಸಂ ಮಿತಿಮೀರಿದೆ ಎಂದು ಸುಮಲತಾ ಪ್ರತ್ಯಾರೋಪ ಮಾಡಿದ್ದಾರೆ. ಗಲಾಟೆ ಬಳಿಕ ಗುರುದೇವರಹಳ್ಳಿಯಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದ್ದು, ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

ಈ ಬಗ್ಗೆ ಕೆಎಂ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *