ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ – ಬಿಎಸ್‍ವೈ ಆಪ್ತ ಎದುರೇ ಕಲ್ಲುತೂರಾಟ

ಹಾಸನ: ರಾಜ್ಯಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಫೈಟ್ ನಡೆಯುತ್ತಿದೆ. ಅತ್ತ ಹಾಸನದ ಅರಸೀಕೆರೆಯಲ್ಲಿ ಜೆಡಿಎಸ್, ಬಿಜೆಪಿ ಬೆಂಬಲಿತ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಅಮ್ಮನಹಟ್ಟಿ ಗ್ರಾಮದಲ್ಲಿ ರಾಜಕೀಯ ವೈಷಮ್ಯದಿಂದಾಗಿ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಜೆಡಿಎಸ್ ಬೆಂಬಲಿಗರ ಗುಂಪಿನಿಂದ ಬಿಜೆಪಿ ಬೆಂಬಲಿತ ಗುಂಪಿನ ಮನೆಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಬಿಜೆಪಿ ಪ್ಲ್ಯಾನ್‌ ಏನು?

ಬಿಜೆಪಿ ಮುಖಂಡ ಸಿಎಂ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಸಮ್ಮುಖದಲ್ಲೇ ಎರಡು ಗುಂಪುಗಳು ಕಿತ್ತಾಟ ನಡೆಸಿದ್ದು, ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಇದನ್ನೂ ಓದಿ: ಸಿದ್ದು-ಎಚ್‌ಡಿಕೆ ಪ್ರತಿಷ್ಠೆಯಲ್ಲಿ ಮೈತ್ರಿ ಅನುಮಾನ – ಜೆಡಿಎಸ್‌ ಮುಂದಿರುವ ಆಯ್ಕೆಗಳೇನು?

Comments

Leave a Reply

Your email address will not be published. Required fields are marked *