ಸೈಕಲ್ ನೀಡಲು ನಿರಾಕರಿಸಿದ ಬಾಲಕನ ಗುಪ್ತಾಂಗ ಕತ್ತರಿಸಲು ಯತ್ನಿಸಿದ ಸಾಧು

ಲಕ್ನೋ: ಸೈಕಲ್ ಕೇಳಿದಾಗ ನೀಡಲು ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಸಾಧುವೊಬ್ಬ ಕತ್ತಿಯಿಂದ ಬಾಲಕನ ಗುಪ್ತಾಂಗ ಕತ್ತರಿಸಲು ಯತ್ನಿಸಿ, ಹಲ್ಲೆ ಮಾಡಿ ಕ್ರೌರ್ಯ ಮೆರೆದ ಘಟನೆ ಉತ್ತರ ಪ್ರದೇಶದ ಫರುಖಾಬಾದ್‍ನಲ್ಲಿ ನಡೆದಿದೆ.

ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಚೋನಪುರ ನಿವಾಸಿಯಾಗಿರುವ 12 ವರ್ಷದ ಬಾಲಕ ಮೇಲೆ ಅದೇ ಗ್ರಾಮದ ಸಾಧು ಹಲ್ಲೆ ಮಾಡಿದ್ದಾನೆ. ಬುಧವಾರ ರಾತ್ರಿ ಬಾಲಕ ರಸ್ತೆಯಲ್ಲಿ ಸೈಕಲ್ ಮೇಲೆ ಹೋಗುತ್ತಿದ್ದನು. ಈ ವೇಳೆ ಆತನಿಗೆ ಅಡ್ಡಗಟ್ಟಿದ ಸಾಧು ಬಾಲಕನ ಸೈಕಲ್ ತನಗೆ ಕೊಡುವಂತೆ ಕೇಳಿದ್ದಾನೆ. ಆಗ ಬಾಲಕ ಸೈಕಲ್ ನೀಡಲು ನಿರಾಕರಿಸಿದ್ದಾನೆ. ಇಷ್ಟಕ್ಕೆ ಕೋಪಗೊಂಡ ಸಾಧು ತನ್ನ ಬಳಿ ಇದ್ದ ಕತ್ತಿಯಿಂದ ಬಾಲಕನ ಗುಪ್ತಾಂಗ ಕತ್ತರಿಸಲು ಯತ್ನಿಸಿ ಹಲ್ಲೆ ಮಾಡಿದ್ದಾನೆ.

ಸಾಧುವಿನ ಕೃರ್ತಕ್ಕೆ ಬಾಲಕ ಗಂಭಿರ ಗಾಯಗೊಂಡಿದ್ದು, ನೋವಿನಿಂದ ಕೂಗಿಕೊಳ್ಳುತ್ತಿದ್ದಂತೆ ಸಾಧು ಸ್ಥಳದಿಂದ ಪರಾರಿಯಾಗಿದ್ದಾನೆ. ಬಾಲಕನ ಕಿರುಚಾಟ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ಬಂದು ಆತನನ್ನು ಕರೆದುಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬಾಲಕನ ಪೋಷಕರು ಹಾಗೂ ಗ್ರಾಮಸ್ಥರು ಸೇರಿ ಸಾಧು ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಸಾಧುವನ್ನು ಆದಷ್ಟು ಬೇಗ ಪತ್ತೆಹಚ್ಚಿ ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *