ಪ್ರತಿಷ್ಠಿತ ಪಬ್‍ನಲ್ಲಿ ಹೊಡೆದಾಟ – ಸುನಾಮಿ ಕಿಟ್ಟಿಯಿಂದ ಹಲ್ಲೆ ಆರೋಪ

ಬೆಂಗಳೂರು: ಪ್ರತಿಷ್ಠಿತ ಬಾರ್‌ವೊಂದರಲ್ಲಿ ಕಿರುತೆರೆ ನಟ ಹಾಗೂ ಆತನ ಗೆಳೆಯರು ಕಂಠ ಪೂರ್ತಿ ಕುಡಿದು ಶಾಂಪೇನ್ ಬಾಟೆಲ್ ಓಪನ್ ಮಾಡುವ ವಿಚಾರಕ್ಕೆ ಗಲಾಟೆ ಮಾಡಿದ ಆರೋಪ ಬಂದಿದೆ.

ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಆತನ ಗೆಳೆಯ ಚೇತನ್ ಗೌಡ ಶಾಂಪೇನ್ ಓಪನ್ ಮಾಡಿದ್ದಾಗ ಪಕ್ಕದಲ್ಲಿ ಇದ್ದ ಕೃಷ್ಣ ಮತ್ತು ಪ್ರಶಾಂತ್ ಮೇಲೆ ಚೆಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೃಷ್ಣ ಮತ್ತು ಪ್ರಶಾಂತ್ ಶಾಂಪೇನ್ ಚೆಲ್ಲಿದ್ದನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಆತನ ಗೆಳೆಯ ಚೇತನ್ ಗೌಡ ಇಬ್ಬರು ಅವಾಚ್ಯ ಶಬ್ದದಿಂದ ಬೈದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಚಿರತೆ ಆತಂಕ – ಶಾಲೆಗಳಿಗೆ ರಜೆ

POLICE JEEP

ಘಟನೆ ಸಂಬಂಧಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಶಾಂತ್ ದೂರು ದಾಖಲಿಸಿದ್ದು, ಅಪರಿಚಿತ ವ್ಯಕ್ತಿಗಳು ನಮ್ಮ ಜೊತೆಗೆ ಗಲಾಟೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇನ್ನೂ ಸುನಾಮಿ ಕಿಟ್ಟಿ ಹಾಗೂ ಆತನ ಸ್ನೇಹಿತ ದೂರು ನೀಡಿದ್ದು, ಮದ್ಯ ಚಲ್ಲಿದ್ದ ಕಾರಣಕ್ಕೆ ಗಲಾಟೆ ಮಾಡಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಸದ್ಯ ಎರಡು ಕೇಸ್ ದಾಖಲು ಮಾಡಿಕೊಂಡಿರುವ ಕಬ್ಬನ್ ಪಾರ್ಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 500ಮೀ. ದೂರದವರೆಗೆ ಕಾರನ್ನು ಎಳೆದೊಯ್ದ ಟ್ರಕ್- ಸಮಾಜವಾದಿ ಮುಖಂಡನಿದ್ದ ಕಾರು ಜಖಂ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *