ರಾಯಚೂರು: ಅಗ್ನಿ ಅವಘಡದಿಂದ ಕಿರಾಣಿ ಅಂಗಡಿ ಭಸ್ಮ

ರಾಯಚೂರು: ಶಾರ್ಟ್ ಸರ್ಕ್ಯೂಟ್ ನಿಂದ ಕಿರಾಣಿ ಅಂಗಡಿಯೊಂದು ಹೊತ್ತಿ ಉರಿದ ಘಟನೆ ನಗರದ ಬಸವನಬಾವಿ ವೃತ್ತದ ಬಳಿ ನಡೆದಿದೆ.

ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆ ಈ ಅವಘಢ ಸಂಭವಿಸಿದ್ದು, ಅಂಗಡಿಯಲ್ಲಿನ ವಸ್ತುಗಳೆಲ್ಲಾ ಸುಟ್ಟು ಹೋಗಿವೆ. ಅಶೋಕ್ ಎಂಬವರಿಗೆ ಸೇರಿದ ಕಿರಾಣಿ ಅಂಗಡಿ ಇದಾಗಿದ್ದು, ಅಂಗಡಿಯಲ್ಲಿನ ಪೀಠೋಪಕರಣ, ದವಸ ಧಾನ್ಯ ಸೇರಿ ಅಂದಾಜು 4 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಬೆಂಕಿಯ ಪ್ರಖರತೆಗೆ ಅಂಗಡಿಯ ಕಟ್ಟಡ ಬಿರುಕು ಬಿಟ್ಟಿದೆ. ಅದೃಷ್ಟವಶಾತ್ ಅಂಗಡಿ ಮೇಲಿನ ಮನೆಯಲ್ಲಿದ್ದ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದು, ನೇತಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರೀ ಪ್ರಮಾಣದ ಹಾನಿಯಾಗಿರುವುದರಿಂದ ಸರ್ಕಾರ ಪರಿಹಾರ ನೀಡಬೇಕು ಎಂದು ಅಂಗಡಿ ಮಾಲೀಕ ಅಶೋಕ್ ಕುಮಾರ್ ಮನವಿ ಮಾಡಿದ್ದಾರೆ.

 

Comments

Leave a Reply

Your email address will not be published. Required fields are marked *