ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅನಾಹುತ!

ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ.

ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಸ್ವಲ್ಪ ಹೊತ್ತಿನಲ್ಲೇ ಬೆಂಕಿ ಹೊತ್ತಿ ಉರಿದು ದಟ್ಟ ಹೊಗೆ ಕೂಡ ಆವರಿಸಿದೆ. ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ – ಸಿದ್ಧರಾಮಯ್ಯ

ಕಟ್ಟಡದ ಬಳಿಯೇ ಪೆಟ್ರೋಲ್ ಬಂಕ್ ಕೂಡ ಇದೆ. ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಅವಘಡ ಸಂಭವಿಸಿರುವ ಕೊಠಡಿಯಲ್ಲಿ ಕಚ್ಚಾ ವಸ್ತುಗಳು ಇರುವ ಕಾರಣ ಬೆಂಕಿ ಇನ್ನೂ ತಹಬದಿಗೆ ಬಂದಿಲ್ಲ. ಇದನ್ನೂ ಓದಿ: ಜಿಮ್‍ನಲ್ಲಿ ಬೆವರು ಹರಿಸುತ್ತಿರುವ ಮೇಘನಾ ರಾಜ್

Comments

Leave a Reply

Your email address will not be published. Required fields are marked *