ಕುಡಿತದ ಚಟ ಬಿಡಲಾಗದೆ ನೇಣು ಬಿಗಿದುಕೊಂಡು ಆಗ್ನಿಶಾಮಕ ದಳ ಸಿಬ್ಬಂದಿ ಆತ್ಮಹತ್ಯೆ?

ಚಿಕ್ಕಬಳ್ಳಾಪುರ: ಮನೆಯ ಮುಂಭಾಗದ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆಗ್ನಿಶಾಮಕ ದಳ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ಪಟ್ಟಣದಲ್ಲಿ ನಡೆದಿದೆ.

ಗೌರಿಬಿದನೂರು ಆಗ್ನಿಶಾಮಕ ದಳ ಸಿಬ್ಬಂದಿ ನಾಗಯ್ಯ (58) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಕನಕಪುರ ತಾಲೂಕಿನವರಾದ ನಾಗಯ್ಯ ಹಲವು ವರ್ಷಗಳಿಂದ ಗೌರಿಬಿದನೂರು ಪಟ್ಟಣದ ನೇತಾಜಿ ಕ್ರೀಡಾಂಗಣದ ಬಳಿಯ ಆಗ್ನಿಶಾಮಕ ದಳ ಇಲಾಖೆಗೆ ಸೇರಿದ ವಸತಿ ಕಟ್ಟಡದಲ್ಲಿ ವಾಸವಾಗಿದ್ದರು.

ಅತಿಯಾದ ಕುಡಿತದ ಚಟದಿಂದ ಅನಾರೋಗ್ಯಕ್ಕೆ ಗುರಿಯಾಗಿದ್ದ ನಾಗಯ್ಯನಿಗೆ ಕುಡಿತದ ಚಟ ಬಿಡುವಂತೆ ವೈದ್ಯರು ಬುದ್ಧಿವಾದ ಹೇಳಿದ್ದರು ಎನ್ನಲಾಗಿದೆ. ಆದ್ರೆ ಕುಡಿತಕ್ಕೆ ದಾಸನಾಗಿದ್ದ ನಾಗಯ್ಯ ಕುಡಿತದ ಚಟ ಬಿಡಲಾಗದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Comments

Leave a Reply

Your email address will not be published. Required fields are marked *