ಮಂತ್ರಾಲಯದಲ್ಲಿ ಅಗ್ನಿ ಅವಘಡಕ್ಕೆ 5 ಅಂಗಡಿಗಳು ಭಸ್ಮ!

ರಾಯಚೂರು: ಗುರು ರಾಘವೇಂದ್ರ ಸ್ವಾಮಿ ಸನ್ನಿಧಿ ಮಂತ್ರಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಹಾನಿಯಾಗಿದೆ.

ರಾಘವೇಂದ್ರ ಸ್ವಾಮಿ ಮಠದ ಬಳಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್‍ನಿಂದ 5 ಅಂಗಡಿಗಳು ಹೊತ್ತಿ ಉರಿದಿವೆ. ತುಂಗಭದ್ರಾ ನದಿ ತೀರದಲ್ಲಿರುವ ಪೂಜೆ ಸಾಮಗ್ರಿ, ಆಟಿಕೆ ಅಂಗಡಿಗಳು ಬೆಂಕಿಗಾಹುತಿಯಾಗಿವೆ.

ಗುರು, ಭೀಮಣ್ಣ, ಜಗಂ ಮಹೇಶ್, ಆದಿ, ಬಂದೇಜಿ ರಾವ್ ಎಂಬವರಿಗೆ ಸೇರಿದ ಅಂಗಡಿಗಳು ಭಸ್ಮವಾಗಿವೆ. ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥರು ಸ್ಥಳ ಪರಿಶೀಲನೆ ನಡೆಸಿದ್ದು ವ್ಯಾಪಾರಿಗಳ ಸಹಾಯಕ್ಕೆ ಮುಂದಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.youtube.com/watch?v=gM-AS0dv-Sk

Comments

Leave a Reply

Your email address will not be published. Required fields are marked *