ಪ್ಲಾಸ್ಟಿಕ್ ಅಂಗಡಿಗೆ ಬೆಂಕಿ- ಇಬ್ಬರು ಸಜೀವ ದಹನ

ವಿಜಯಪುರ: ಪ್ಲಾಸ್ಟಿಕ್ ಅಂಗಡಿಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಈ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಬಸವನಬಾಗೇವಾಡಿ ಕ್ರಾಸ್ ಬಳಿ ಘಟನೆ ನಡೆದಿದೆ.

ಅಶೋಕ ದೇಸ್ನೂಯಿ(25), ಲಿಂಬಾರಾಮ ದೇಸ್ನೂಯಿ(35) ಸಜೀವ ದಹನವಾದ ದುರ್ದೈವಿಗಳಾಗಿದ್ದಾರೆ.  ಈ ಘಟನೆಯಿಂದಾಗಿ ಹೆದ್ದಾರಿ ಪಕ್ಕದಲ್ಲಿದ್ದ ಎರಡು ಪ್ಲಾಸ್ಟಿಕ್ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ತಡರಾತ್ರಿ ಈ ಘಟನೆ ನಡೆದಿದ್ದು, ಹೊತ್ತಿಕೊಂಡ ಬೆಂಕಿ ಕೆನ್ನಾಲಿಗೆಗೆ ಇಬ್ಬರು ಬಲಿಯಾಗಿದ್ದಾರೆ. ಇದನ್ನೂ ಓದಿ: UP Election: ಭಾರತದ ಅತಿ ಎತ್ತರದ ಮನುಷ್ಯ ಸಮಾಜವಾದಿ ಪಕ್ಷ ಸೇರ್ಪಡೆ

ಪ್ಲಾಸ್ಟಿಕ್ ಅಂಗಡಿ ಸುಟ್ಟು ಭಸ್ಮವಾಗಿದೆ. ರಾತ್ರಿ ಅಂಗಡಿಯಲ್ಲೇ ಮಲಗಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇದರಿಂದ ಸಾಲು ಸಾಲಾಗಿದ್ದ ಏಳೆಂಟು ಪ್ಲಾಸ್ಟಿಕ್ ಅಂಗಡಿಗಳ ರಕ್ಷಣೆಯಾಗಿವೆ. ಸ್ಥಳಕ್ಕೆ ನಿಡಗುಂದಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: UP Election – ಅಮಿತ್ ಶಾ ಮನೆ-ಮನೆ ಪ್ರಚಾರ

Comments

Leave a Reply

Your email address will not be published. Required fields are marked *