ದೇಶಾದ್ಯಂತ ಪಟಾಕಿ ಆಗುತ್ತಾ ಬ್ಯಾನ್?

ಬೆಂಗಳೂರು: ದೀಪಾವಳಿಗೆ ಇನ್ನೇನು ಕೆಲವೇ ದಿನಗಳು ಉಳಿದಿವೆ. ಆದರೆ ಈ ಬಾರಿಯ ದೀಪಾವಳಿಯನ್ನು ಪಟಾಕಿ ಸಿಡಿಸದೇ ಆಚರಿಸಬೇಕಾಗಬಹುದು. ಯಾಕಂದರೆ ದೇಶದಲ್ಲಿ ಪಟಾಕಿ ಉತ್ಪಾದನೆ ಮತ್ತು ಮಾರಾಟದ ಮೇಲೆ ನಿಷೇಧ ಹೇರುವ ಕುರಿತು ಇವತ್ತು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ.

ಕಳೆದ ವರ್ಷ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಳ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ನಿಷೇಧಿಸಿ ಸುಪ್ರೀಂಕೋರ್ಟ್ ಆದೇಶಿಸಿತ್ತು. ಅದರ ಬೆನ್ನಲ್ಲೇ ಇಡೀ ದೇಶಾದ್ಯಂತ ಪಟಾಕಿ ಉತ್ಪಾದನೆ ಮತ್ತು ಮಾರಾಟದ ಮೇಲೆ ನಿಷೇಧ ಹೇರಬೇಕೆಂದು ಅರ್ಜಿ ಸಲ್ಲಿಕೆಯಾಗಿತ್ತು.

ದೇಶಾದ್ಯಂತ ಸಂಪೂರ್ಣ ಪಟಾಕಿ ನಿಷೇಧಕ್ಕೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ಪಟಾಕಿ ಉತ್ಪಾದನೆ ಮತ್ತು ಮಾರಾಟದ ಮೇಲೆ ಕೆಲವೊಂದು ಷರತ್ತುಗಳನ್ನು ವಿಧಿಸಿ ಅವಕಾಶ ನೀಡಬೇಕೆಂದು ಸಲಹೆ ನೀಡಿದೆ.

ಮತ್ತೊಂದು ಕಡೆ ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗುತ್ತದೆ ಅನ್ನೋ ಕಾರಣಕ್ಕೆ ಪಟಾಕಿ ಉತ್ಪಾದನೆ ಮೇಲೆಯೇ ನಿಷೇಧ ಹೇರಿದ್ರೆ, ಈ ಉದ್ಯಮವನ್ನೇ ನಂಬಿಕೊಂಡಿರುವ ಅದೆಷ್ಟೋ ಕುಟುಂಬಗಳು ಬೀದಿಗೆ ಬರಲಿವೆ ಅನ್ನೋದು ಪಟಾಕಿ ಉತ್ಪಾದಕರ ವಾದವಾಗಿದೆ. ಹೀಗಾಗಿ ಇವತ್ತು ಸುಪ್ರೀಂಕೋರ್ಟ್ ನೀಡಲಿರುವ ತೀರ್ಪು ಕುತೂಹಲ ಮೂಡಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *