ಯಡಿಯೂರಪ್ಪ ಮುಖ್ಯಮಂತ್ರಿಯಾಗದ್ದಕ್ಕೆ ಅಭಿಮಾನಿಯಿಂದ ಆತ್ಮಹತ್ಯೆಗೆ ಯತ್ನ

ಕಾರವಾರ: ಯಡಿಯೂರಪ್ಪ ಮುಖ್ಯಮಂತ್ರಿಯಾಗದ ಹಿನ್ನೆಲೆಯಲ್ಲಿ ಮನನೊಂದು ಬಿಜೆಪಿ ಕಾರ್ಯಕರ್ತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿಯಲ್ಲಿ ನಡೆದಿದೆ.

ಸುರೇಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತ. ಬಹುಮತ ಸಾಬೀತುಪಡಿಸಲಾಗದೇ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದನ್ನು ಮನಸ್ಸಿಗೆ ಹಚ್ಚಿಕೊಂಡು ಸೋಮವಾರ ತಡರಾತ್ರಿ ವಿಷ ಸೇವಿಸಿದ್ದಾರೆ.

ಈ ವಿಚಾರ ಮನೆಯವರ ಗಮನಕ್ಕೆ ಬಂದಕೂಡಲೇ ಶಿರಸಿ ನಗರದ ಸಿಟಿ ಸ್ಯ್ಕಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಸುರೇಶ್ ಅವರನ್ನು ತೀವ್ರ ನಿಗಾ ಘಟಕದಲ್ಲಿಡಲಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ಘಟನೆ ಸಂಬಂಧ ಶಿರಸಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *