ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಕಣಕ್ಕೆ ಇಳಿದ ತಂದೆ!

ದಾವಣಗೆರೆ: ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಲೋಕ ಕಣಕ್ಕೆ ಧುಮುಕಲು ತಂದೆ ಸಿದ್ಧರಾಗಿದ್ದು, ಲೋಕಸಭಾ ಅಖಾಡಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಫೈನಲ್ ಆಗಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ದಕ್ಷಿಣ ಕ್ಷೇತ್ರವನ್ನ ಪುತ್ರನಿಗೆ ಬಿಟ್ಟುಕೊಡಲು ಶಾಮನೂರು ಸಂಕಲ್ಪ ತೊಟ್ಟಿದ್ದಾರೆ ಎನ್ನಲಾಗುತ್ತಿದೆ. ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಈಗಾಗಲೇ ಮೂರು ಬಾರಿ ಜಿ.ಎಂ.ಸಿದ್ದೇಶ್ವರ್ ವಿರುದ್ಧ ಸೋಲು ಕಂಡಿದ್ದಾರೆ. ಆದ್ರೆ ಈ ಬಾರಿ ಸ್ವತಃ ಶಾಮನೂರು ಅವರೇ ಕಣಕ್ಕೆ ಇಳಿದು ಜಿ.ಎಂ.ಸಿದ್ದೇಶ್ವರ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಈ ಹಿಂದೆ ಸೋತಿರುವ ಭಯದಿಂದ ಈ ಬಾರಿ ಲೋಕಸಮರಕ್ಕೆ ಎಸ್.ಎಸ್.ಮಲ್ಲಿಕಾರ್ಜುನ್ ಹಿಂದೇಟು ಹಾಕಿದ್ದಾರೆ.

ಸದ್ಯ ಬೀಗರ ಜಿದ್ದಾಜಿದ್ದಿಗೆ ದಾವಣಗೆರೆ ಲೋಕಸಭಾ ಕ್ಷೇತ್ರ ಸಾಕ್ಷಿಯಾಗಲಿದೆ. ಯಾಕೆಂದರೆ ಶಾಮನೂರು ಹಾಗೂ ಸಿದ್ದೇಶ್ವರ್ ಇಬ್ಬರೂ ಸಂಬಂಧದಲ್ಲಿ ಮಾವ-ಅಳಿಯ ಆಗುತ್ತಾರೆ. ಆದ್ರೆ ಅಳಿಯನ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕ್ತಾರಾ ಮಾವ ಅನ್ನೋದನ್ನ ಕಾದು ನೋಡಬೇಕಾಗಿದೆ.

Comments

Leave a Reply

Your email address will not be published. Required fields are marked *