ಸೀಟ್ ವಾಸ್ತುಪ್ರಕಾರ ಸರಿಯಾಗಿದೆ, ಮುಂದೆ ಬನ್ನಿ: ನಗೆಗಡಲಲ್ಲಿ ತೇಲಿಸಿದ ಸ್ಪೀಕರ್

ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇಂದು ಸದನದಲ್ಲಿ ಹಿಂದಿನ ಸಾಲಿನಲ್ಲಿ ಕುಳಿತುಕೊಂಡಿದ್ದರು. ಆಗ ಅದನ್ನು ಗಮನಿಸಿದ ವಿಧಾನಸಭಾ ಸಭಾಪತಿ ರಮೇಶ್ ಕುಮಾರ್ ರೇವಣ್ಣರನ್ನು ಕರೆದು ಮುಂದಿನ ಸಾಲಿನಲ್ಲಿ ಕುಳಿತುಕೊಳ್ಳುವಂತೆ ಹೇಳಿದರು.

ತಕ್ಷಣ ಸಭಾಪತಿಗಳ ಮಾತಿಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, ಮುಂದಿನ ಸೀಟುಗಳನ್ನು ಹಿರಿಯರಿಗೆ ಬಿಟ್ಟಿದ್ದೇನೆ. ಹೀಗಾಗಿ ಇಲ್ಲಿ ಕುಳಿತ್ತಿದ್ದೇನೆ ಎಂದು ಉತ್ತರಿಸಿದರು. ಅದಕ್ಕೆ ಸ್ಪೀಕರ್, ನೀವು ಮುಂದಿನ ಸಾಲಿನಲ್ಲಿ ಕುಳಿತರೇ ಲಕ್ಷಣ. ಬನ್ನಿ ಮುಂದಿನ ಸಾಲಿನಲ್ಲಿ ಕುಳಿತುಕೊಳ್ಳಿ. ನೀವು ಮುಂದಿನ ಸಾಲಿನಲ್ಲಿ ಕುಳಿತುಕೊಂಡಿದ್ದರೆ ಅದನ್ನು ನೋಡಲು ಲಕ್ಷಣವಾಗಿರುತ್ತೆ. ಅಲ್ಲದೇ ಮುಂದಿನ ಸೀಟ್ ವಾಸ್ತುಪ್ರಕಾರವೂ ಚೆನ್ನಾಗಿದೆ ಎಂದು ಹೇಳಿ ಸದನದಲ್ಲಿ ಎಲ್ಲರನ್ನು ನಗೆಗಡಲಲ್ಲಿ ತೇಲಿಸಿದರು. ಇದನ್ನು ಓದಿ:  ವಾಸ್ತು ಪ್ರಕಾರ ಪೂಜೆ ಮಾಡ್ತಿಲ್ಲ ಅಂತಾ ಸಚಿವ ರೇವಣ್ಣರಿಂದ ಅರ್ಚಕರಿಗೆ ಕ್ಲಾಸ್

ಅಲ್ಲದೇ ಈ ಸಂದರ್ಭದಲ್ಲಿ ಎಲ್ಲಿ ಇನ್ನೂ ಇಬ್ಬರು ಸಚಿವರು ಕಾಣ್ತಿಲ್ಲ, ಜಮೀರ್ ಅಹ್ಮದ್ ಮತ್ತು ಯು ಟಿ ಖಾದರ್ ಇನ್ನು ಬಂದಿಲ್ಲ ಅಂತಾ ಸಭಾಪತಿ ರಮೇಶ್ ಕುಮಾರ್ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಗೆ ಪ್ರಶ್ನಿಸಿದರು.

Comments

Leave a Reply

Your email address will not be published. Required fields are marked *