ಬಾಲಕನನ್ನ ಬಲಿ ಪಡೆದಿದ್ದ ನರಭಕ್ಷಕ ಚಿರತೆ ಕೊನೆಗೂ ಬೋನಿಗೆ ಬಿತ್ತು

ಬಳ್ಳಾರಿ: ಕಳೆದ ಒಂದು ವಾರದ ಹಿಂದೆ ಸಂಡೂರು ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಮೂರು ವರ್ಷದ ಮಗುವನ್ನ ಹೊತ್ತೊಯ್ದಿದ್ದ ಚಿರತೆ ಬೋನಿಗೆ ಬಿದ್ದಿದ್ದೆ.

ಕಳೆದ ಒಂದು ವಾರದಿಂದ ಚಿರತೆ ಸೆರೆಗೆ ಮುಂದಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಯಶ್ವಸಿಯಾಗಿದೆ. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ನಂತರ ಎಚ್ಚೆತ್ತುಕೊಂಡ ಅಧಿಕಾರಿಗಳು ಚಿರತೆಯನ್ನು ಸೆರೆಹಿಡಿದು ಇದೀಗ ಬೇರೆಡೆ ಸಾಗಿಸಿದ್ದಾರೆ. ಹೀಗಾಗಿ ಪ್ರತಿನಿತ್ಯ ಕೈಯಲ್ಲೇ ಜೀವ ಹಿಡಿದು ಓಡಾಡುತ್ತಿದ್ದ ಸಂಡೂರು ತಾಲೂಕಿನ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಏನಿದು ಪ್ರಕರಣ?
ಡಿಸೆಂಬರ್ 12 ರಂದು ಸಂಜೆ ಆಟವಾಡುವಾಗ ಮನೆಯವರು ನೋಡ ನೋಡುತ್ತಿದ್ದಂತೆಯೇ ಚಿರತೆ ಬಾಲಕನನ್ನು ಎಳೆದೊಯ್ದಿದೆ. ಬಳಿಕ ಆತನ ಪೋಷಕರು ಹಾಗೂ ಗ್ರಾಮಸ್ಥರು ಬಾಲಕನನ್ನ ಹುಡುಕಾಡಿದ್ದಾರೆ. ಗ್ರಾಮದ ಹೊರವಲಯದಲ್ಲಿ ಬಾಲಕ ಶವವಾಗಿ ಪತ್ತೆಯಾಗಿದ್ದನು. ಬೆಳೆದು ನಿಂತ ಕುಡಿಯನ್ನು ಶವವಾಗಿ ನೋಡಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಚಿರತೆಯನ್ನು ಹಿಡಿಯುವಂತೆ ಹಲವು ಬಾರಿ ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಇಲಾಖೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಅಂತ ಸೋಮಲಾಪುರ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶಿತರಾಗಿದ್ದರು. ಚಿರತೆ ಮಗುವನ್ನು ಹೊತ್ತೊಯ್ದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಬೀಡು ಬಿಟ್ಟು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆಗೆ ಮುಂದಾಗಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *