ಬಸ್ ಓಡಿಸಿಕೊಂಡಿದ್ದವನನ್ನು ಕರ್ಕೊಂಡು ಬಂದು ಶಾಸಕ ಮಾಡಿದೆ -ಜಮೀರ್ ವಿರುದ್ಧ ಹೆಚ್‍ಡಿಕೆ ವಾಗ್ದಾಳಿ

ಹಾವೇರಿ: ಬಸ್ ಓಡಿಸಿಕೊಂಡಿದ್ದವನನ್ನು ಕರೆದುಕೊಂಡು ಬಂದು ಶಾಸಕ ಮಾಡಿದೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಹಾನಗಲ್ ಹಾಗೂ ಸಿಂಧಗಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ನಾಯಕರುಗಳ ವಾಕ್ಸಮರ ಮುಂದುವರಿದಿದೆ. ಅಂತೆಯೇ ಇದೀಗ ಹೆಚ್‍ಡಿಕೆ ಅವರು ಜಮೀರ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನಲ್ಲಿ ಯಂಕ, ನಾಣಿ, ಸೀನ ಅನ್ನೋ ಎಂಪಿಗಳಿದ್ದಾರೆ ಅಷ್ಟೇ: ಬಿಎಸ್‍ವೈ

ಎಲ್ಲೋ ಬಸ್ ಓಡಿಸುತ್ತಿದ್ದವನನ್ನು ಕರ್ಕೊಂಡು ಬಂದು ಶಾಸಕನನ್ನಾಗಿ ಮಾಡಿದೆ ಎಮದು ಹೇಳುವ ಮೂಲಕ ಜಮೀರ್ ಅಹ್ಮದ್ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಚಾಮರಾಜಪೇಟೆಯಲ್ಲಿ ಮುಸ್ಲಿಂ ಹುಡುಗನಿಗೆ ಟಿಕೆಟ್ ಕೊಟ್ಟು ಶಾಸಕನಾಗಿ ಮಾಡಿದೆ. ಆವಾಗ ಸಿದ್ದರಾಮಯ್ಯ ಎಲ್ಲಿ ಹೋಗಿದ್ದರು..? ಎಂದು ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಕೂಡ ಹೆಚ್‍ಡಿಕೆ ಗರಂ ಆಗಿದ್ದಾರೆ.

Comments

Leave a Reply

Your email address will not be published. Required fields are marked *