10 ದಿನಗಳ ಕಾಲ ಮಾಜಿ ಸಿಎಂಗೆ ಧರ್ಮಸ್ಥಳದಲ್ಲಿ ಚಿಕಿತ್ಸೆ

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು 10 ದಿನಗಳವರೆಗೆ ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯಲಿದ್ದಾರೆ.

ಧರ್ಮಸ್ಥಳ ಶಾಂತಿವನದ ಪ್ರಕೃತಿ ಚಿಕಿತ್ಸಾಲಯದಲ್ಲಿ ಸಿದ್ದರಾಮಯ್ಯ ಇಂದಿನಿಂದ 10 ದಿನಗಳ ಕಾಲ ಚಿಕಿತ್ಸೆ ಪಡೆಯಲಿದ್ದಾರೆ. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಿದ್ದರಾಮಯ್ಯ, ನನಗೇನು ಆರೋಗ್ಯ ತೊಂದರೆ ಇಲ್ಲ. ಸಾಮಾನ್ಯ ಚಿಕಿತ್ಸೆಗಾಗಿ ಆಗಮಿಸಿದ್ದೇನೆ. 10 ದಿನ ಸಾಮಾನ್ಯ ಚಿಕಿತ್ಸೆ ನಡೆಯಲಿದೆ ಅಂತಾ ಹೇಳಿದ್ದಾರೆ.

ಇದೇ ವೇಳೆ ಇನ್ನು ಒಂದು ವರ್ಷ ನಮ್ಮ ಸರ್ಕಾರ ಇರುತ್ತದೆ. ನನ್ನನ್ನು ಯಾರು ಟಚ್ ಮಾಡಲ್ಲ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಕುಮಾರಸ್ವಾಮಿ ಅವರ ಬಳಿಯೇ ಪ್ರಶ್ನೆ ಕೇಳಿ ಎಂದು ಹೇಳಿದ್ದಾರೆ.

ಇನ್ನು ಸುಳ್ಯದ ಮಡಪ್ಪಾಡಿಯಲ್ಲಿ ನಕ್ಸಲರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಕ್ಸಲ್ ಕೂಬಿಂಬ್ ಬಗ್ಗೆ ದಕ್ಷಿಣ ಕನ್ನಡ ಎಸ್.ಪಿ ರವಿಕಾಂತೇಗೌಡರಿಂದ ಮಾಹಿತಿ ಪಡೆದಿದ್ದಾರೆ.

Comments

Leave a Reply

Your email address will not be published. Required fields are marked *