ಮಾಜಿ ಡಿವೈಎಸ್‍ಪಿ ಅನುಪಮಾ ಶೆಣೈ ರಾಜಕೀಯಕ್ಕೆ

ಉಡುಪಿ: ಮಾಜಿ ಡಿವೈಎಸ್‍ಪಿ ಅನುಪಮಾ ಶೆಣೈ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಈ ಬಗ್ಗೆ ಉಡುಪಿಯ ಉಚ್ಚಿಲದಲ್ಲಿ ಮಾತನಾಡಿದ ಅನುಪಮಾ ಶೆಣೈ, ಹೊಸ ಪಕ್ಷ ಕಟ್ಟುವುದಾಗಿ ತಿಳಿಸಿದ್ದಾರೆ. ರಾಜಕಾರಣದಲ್ಲಿ ಪೊಲೀಸಿಂಗ್ ಮಾಡಬೇಕಿದೆ. ಸಮಾನ ಮನಸ್ಕರೊಂದಿಗೆ ಮಾತುಕತೆ ನಡೆಸಿ ಒಂದು ತಿಂಗಳೊಳಗೆ ಎಲ್ಲರಿಂದ ಅಭಿಪ್ರಾಯ ಪಡೆಯುತ್ತೇನೆ. ತಜ್ಞರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಗಾಂಧೀಜಿಯ ಗ್ರಾಮ ಸ್ವರಾಜ್ಯ ಕನಸು ನನಸು ಮಾಡಬೇಕಿದೆ ಎಂದು ಹೇಳಿದ್ರು.

ಮೊದಲ ಸುತ್ತಿನ ಮಾತುಕತೆ ನಡೆದಿದೆ. ಬಳ್ಳಾರಿಯಿಂದಲೇ ಸ್ಪರ್ಧೆ ಮಾಡುತ್ತೇನೆ. ಸಾರ್ವಜನಿಕರು ತಮ್ಮ ಅಭಿಪ್ರಾಯ ನೇರವಾಗಿ ಹಂಚಿಕೊಳ್ಳಬಹುದು ಎಂದು ಪಬ್ಲಿಕ್ ಟಿವಿಗೆ ಅನುಪಮಾ ಶೆಣೈ ಹೇಳಿಕೆ ನೀಡಿದ್ರು.

 

ರಾಜಕೀಯಕ್ಕೆ ಭ್ರಷ್ಟತೆ ಸಂಪೂರ್ಣ ಆವರಿಸಿಕೊಂಡಿದೆ. ಜನರ ದನಿಯೇ ನಮ್ಮ ಪಕ್ಷದ ಉದ್ದೇಶ. ರಾಜನಾಥ್ ಸಿಂಗ್, ಕೇಜ್ರಿವಾಲ್ ಹಾಗೂ ಉಪೇಂದ್ರ ಅವರನ್ನ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಮುಖಂಡರ ಜೊತೆಯೂ ಮಾತುಕತೆ ಮಾಡಿದ್ದೇನೆ ಅಂತ ಹೇಳಿದ್ರು.

 

 

Comments

Leave a Reply

Your email address will not be published. Required fields are marked *