ಸಿಎಂ ಆಗ್ಲೇಬೇಕುಂತ ರಗ್ಗು ಹೊದ್ದು ಮಲಗಿದ್ದ ಸಿದ್ದರಾಮಯ್ಯರನ್ನು ಕರ್ಕೊಂಡು ಬಂದಿದ್ದು ನಾನು: ಹೆಚ್‍ಡಿಕೆ

ವಿಜಯಪುರ: ಮುಖ್ಯಮಂತ್ರಿ ಆಗಲೇಬೇಕು ಎಂದು ಸಿದ್ದರಾಮಯ್ಯ ಅವರು ಕರ್ನಾಟಕ ಭವನದಲ್ಲಿ ರಗ್ಗು ಹೊದ್ದು ಮಲಗಿದ್ದರು. ಆಗ ಅವರನ್ನು ಕರೆದುಕೊಂಡು ಬಂದವನು ನಾನು. ನಂತರ ಅವರು ಉಪಮುಖ್ಯಮಂತ್ರಿ ಆದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 1994ರಲ್ಲಿ ಜನತಾದಳ ಅಧಿಕಾರಕ್ಕೆ ಬರುವಲ್ಲಿ ಸಿದ್ದರಾಮಯ್ಯನವರಿಗಿಂತ ನನ್ನ ಕೊಡುಗೆ ಒಂದು ಕೈ ಹೆಚ್ಚಿದೆ. ನಾನು ರಾಜಕಾರಣದಿಂದ ದೂರ ಇದ್ದರೂ ಸಹ ನನ್ನದೇ ಆದ ರೀತಿಯಲ್ಲಿ ಕೆಲಸ ಮಾಡಿದ್ದೆ. ಹೀಗಾಗಿ ಅಂದು ಜನತಾದಳ ಅಧಿಕಾರಕ್ಕೆ ತರುವಲ್ಲಿ ಸಿದ್ದರಾಮಯ್ಯಗಿಂತ ನನ್ನ ಕೊಡುಗೆ ಹೆಚ್ಚಿದೆ ಎಂದರು. ಇದನ್ನೂ ಓದಿ: ನನ್ನನ್ನು ಬಿಜೆಪಿಗೆ ಹೋಗಿ ಅಂದಿದ್ದೇ ಜಮೀರ್: ಗೋಪಾಲಯ್ಯ

ಸಿದ್ದರಾಮಯ್ಯಗೆ ಕೇಳ್ತೇನೆ ದೇವೇಗೌಡರು ಎಂದೂ ಸಹ ಬಿಜೆಪಿ ಜೊತೆ ಕೈ ಜೋಡಿಸಿಲ್ಲ. ದೇವೇಗೌಡರ ಜಾತ್ಯಾತೀತತೆ ಪ್ರಶ್ನಿಸುವ ನೈತಿಕತೆ ಈ ವ್ಯಕ್ತಿ (ಸಿದ್ದರಾಮಯ್ಯ) ಎಲ್ಲಿ ಉಳಿಸಿಕೊಂಡಿದ್ದಾರೆ? ನಾನ್ಯಾಕೆ ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಿದೆ ಎಂಬುದನ್ನು ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಕುರುಬ ಸಮಾಜ ಹರಾಜು ಹಾಕೋ ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ: ಎಚ್.ವಿಶ್ವನಾಥ್ ಕಿಡಿ

ನಾನು ಬಿಜೆಪಿ ಜೊತೆ ಹೋಗಿ ಸರ್ಕಾರ ಮಾಡುವಂತೆ ಮಾಡಿದ್ದೇ ಸಿದ್ದರಾಮಯ್ಯ. ಆಗ ಸಿದ್ದರಾಮಯ್ಯ ಜೆಡಿಎಸ್ ಮುಗಿಸಲು ಅಹಿಂದ ಮಾಡಿದರು. ಜೆಡಿಎಸ್ ಉಳಿಸಲು ಅನಿವಾರ್ಯವಾಗಿ ಬಿಜೆಪಿ ಜೊತೆ ಕೈ ಜೋಡಿಸಿದೆ. ನವೀನ್ ಪಟ್ನಾಯಕ್ ಜೊತೆ ಒರಿಸ್ಸಾದಲ್ಲಿ ಮಾಡಿದಂತೆ ನಿಮ್ಮನ್ನೇ ಸಿಎಂ ಮಾಡ್ತೀವಿ ಅಂತ ಹೇಳಿ ಬಿಜೆಪಿಯವರೇ ದುಂಬಾಲು ಬಿದ್ದರು. ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಆಗೋ ಹುಚ್ಚು. ಸಿದ್ದರಾಮಯ್ಯನಂತವರು ಟೋಪಿ ಹಾಕಿ ಹೋದರೂ ಸಹ, ಚೂರಿ ಹಾಕಿ ಹೋದರೂ ಸಹ ಜೆಡಿಎಸ್ ಉಳಿದಿದ್ದು ನಾನು ಸಿಎಂ ಆಗಿ ಮಾಡಿರೋ ಕೆಲಸಗಳಿಂದ ಎಂದು ಗರಂ ಆದರು. ಇದನ್ನೂ ಓದಿ: ಎರಡೂ ಉಪಚುನಾವಣೆಯಲ್ಲಿ ಜೆಡಿಎಸ್ ಲೆಕ್ಕಕ್ಕೆ ಇಲ್ಲ: ಜಮೀರ್

ಶಿವಸೇನೆ ಜೊತೆ ಸೇರಿ ಸರ್ಕಾರ ರಚನೆ ಮಾಡಿರೋ ನಿಮ್ಮದ್ಯಾವ ಜಾತ್ಯಾತೀತತೆ ಸಿದ್ದರಾಮಯ್ಯನವರೇ? ಸಂಪುಟ ಸಂಪೂರ್ಣ ಪುನರ್ ರಚನೆ ಮಾಡೋಣ ಅಂತ ನಾನು ಹೇಳಿದಾಗ ಸಿದ್ದರಾಮಯ್ಯ ಅಂದು ಟವಲ್ ಕೊಡವಿ ಹೆಗಲ ಮೇಲೆ ಹಾಕಿಕೊಂಡು ಎದ್ದು ಹೋದರು. ಸಿದ್ದರಾಮಯ್ಯನವರೇ ನನ್ನ ರಾಜಗುರುಗಳು ಎನ್ನುವ ವ್ಯಕ್ತಿಯೇ ಅಂದು ನನಗೆ ಫೋನ್ ಮಾಡಿ ಗೋಪಲಯ್ಯನ ನಾನೇ ಕಳುಹಿಸಿದ್ದೇನೆ ಅಂತ ಬೆದರಿಕೆ ಹಾಕಿದ್ರು ಎಂದು ಜಮೀರ್ ಹೆಸರು ಹೇಳದೇ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ಬಸ್ ಓಡಿಸಿಕೊಂಡಿದ್ದವನನ್ನು ಕರ್ಕೊಂಡು ಬಂದು ಶಾಸಕ ಮಾಡಿದೆ -ಜಮೀರ್ ವಿರುದ್ಧ ಹೆಚ್‍ಡಿಕೆ ವಾಗ್ದಾಳಿ

Comments

Leave a Reply

Your email address will not be published. Required fields are marked *