ಚುನಾವಣೆ ವೇಳೆ ಸೀಜ್ ಆಗಿದ್ದ ರಿವಾಲ್ವರ್ ಆನಂದ್ ಅಸ್ನೋಟಿಕರ್‌ಗೆ ವಾಪಸ್

ಹಾವೇರಿ: ಕಳೆದ ಲೋಕಸಭಾ ಚುನಾವಣೆ ವೇಳೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಇಂದು ಜಿಲ್ಲೆ ರಾಣೇಬೆನ್ನೂರಿನ ಜೆಎಂಎಫ್‍ಸಿ ಕೋರ್ಟಿಗೆ ಹಾಜರಾಗಿದ್ದರು.

2019ರ ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಜಾರಿ ಮಾಡಿದ್ದ ಸಂದರ್ಭದಲ್ಲಿ ಪರವಾನಗಿ ನವೀಕರಸಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಅಲ್ಲದೇ ಮಾಜಿ ಸಚಿವರ ಕಾರು ಮತ್ತು ರಿವಾಲ್ವರ್ ಅನ್ನು ಸೀಜ್ ಮಾಡಲಾಗಿತ್ತು. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ಅಧಿಕಾರಿಗಳು ಮಾಕನೂರು ಚೆಕ್‍ಪೋಸ್ಟ್ ನಲ್ಲಿ ಬಳಿ ರಿವಾಲ್ವರ್ ಮತ್ತು ಕಾರನ್ನು ವಶಕ್ಕೆ ಪಡೆದಿದ್ದರು.

ಪ್ರಕರಣ ಸಂಬಂಧ ಇಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರು ಸಂಬಂಧಿಸಿದ ದಾಖಲೆಗಳನ್ನು ಖುದ್ದು ಕೋರ್ಟಿಗೆ ಹಾಜರು ಪಡಿಸಿದ್ದರು. ಅಲ್ಲದೇ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದರಿಂದ ನ್ಯಾಯ ಸಿಕ್ಕಿದೆ. ಅಂದಿನ ದಿನ ಕಾರು ಚಾಲಕ ರಿವಾಲ್ವರ್ ಗೆ  ಸಂಬಂಧಿಸಿದ ದಾಖಲೆ ಬಿಟ್ಟು ಬಂದಿದ್ದು ತೊಂದರೆಯಾಗಿತ್ತು. ಈಗ ನ್ಯಾಯ ಸಿಕ್ಕಿದೆ ಎಂದು ಅಸ್ನೋಟಿಕರ್ ಪ್ರತಿಕ್ರಿಯೆ ನೀಡಿದರು.

Comments

Leave a Reply

Your email address will not be published. Required fields are marked *