ಮಾಜಿ ಸಚಿವ ಬಿ.ಎ.ಮೊಯಿದ್ದೀನ್ ವಿಧಿವಶ

ಬೆಂಗಳೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಸಚಿವ ಬಿ.ಎ.ಮೊಯಿದ್ದೀನ್ (80) ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.

ಉಸಿರಾಟದ ತೊಂದರೆ ಸೇರಿದಂತೆ ವಯೋ ಸಹಜ ಕಾಯಿಲೆಯಿಂದ ಮೊಯಿದ್ದೀನ್ ಬಳಲುತ್ತಿದ್ದರು. ಮೂಲತಃ ಮಂಗಳೂರು ನಿವಾಸಿಗಳಾಗಿದ್ದು, ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ‘ನನ್ನೊಳಗಿನ ನಾನು’ ಎಂಬ ಆತ್ಮಕಥೆಯನ್ನು ಮೊಯಿದ್ದೀನ್ ಬರೆದಿದ್ದರು. ಆದರೆ ಪುಸ್ತಕ ಇನ್ನೂ ಬಿಡುಗಡೆ ಆಗಿರಲಿಲ್ಲ.

ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡಿದ್ದ ಮೊಯಿದ್ದೀನ್ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದರು. ಸದ್ಯ ಅವರ ಪಾರ್ಥೀವ ಶರೀರವನ್ನು ರಾಮಯ್ಯ ಆಸ್ಪತ್ರೆಯಿಂದ ಸಂಜಯ್ ನಗರದಲ್ಲಿರುವ ಮೊಯಿದ್ದೀನ್ ಅವರ ನಿವಾಸಕ್ಕೆ ರವಾನಿಸಲಾಗಿದೆ. ಮೊಯಿದ್ದೀನ್ ನಿವಾಸಕ್ಕೆ ಸಚಿವ ಯು.ಟಿ.ಖಾದರ್ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ.

Comments

Leave a Reply

Your email address will not be published. Required fields are marked *