ಕಾಂಗ್ರೆಸ್‍ನಲ್ಲಿ ಯಾವುದೇ ಅಸಮಾಧಾನ ಇಲ್ಲ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಮೇಯರ್ ಆಯ್ಕೆ ಆಗುವ ಸಂದರ್ಭದಲ್ಲಿ ಯಾರೂ ಯಾವ ಕೆಟಗೇರಿ ಎಂದು ಕೇಳುವುದು ಸಾಮಾನ್ಯ. ಆದರೆ ಇದನ್ನು ನಾವು ಅಸಮಾಧಾನ ಎಂದು ಹೇಳಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದಾರೆ.

ಕಾಂಗ್ರೆಸ್‍ನಲ್ಲಿ ಯಾವುದೇ ಅಸಮಾಧಾನ ಇಲ್ಲ. ಮೇಯರ್ ಆಯ್ಕೆ ವೇಳೆ ಆಕಾಂಕ್ಷಿಗಳು ಇರೋದು ಸಾಮಾನ್ಯ. ಹಾಗಂತ ಇದನ್ನು ಭಿನ್ನಮತ ಎನ್ನುವುದು ಸರಿಯಲ್ಲ. ಆಶಾ ಸುರೇಶ್ ಇಲ್ಲೇ ಒಳಗೆ ಕೂತಿದ್ದಾರೆ. ಅಲ್ಲದೇ 6 ಪಕ್ಷೇತರರು ಕೂಡ ಬಂದಿದ್ದಾರೆ ಎಂದು ಹೇಳಿದ್ರು.

ಜೆಡಿಎಸ್‍ನವರು ಯಾರೂ ವಿಪ್ ಉಲ್ಲಂಘನೆ ಮಾಡಲ್ಲ. 1993ರಿಂದ ಎಲ್ಲಾ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ಪರಮೇಶ್ವರ್, ದಿನೇಶ್ ಗುಂಡೂರಾವ್, ಹ್ಯಾರಿಸ್ ಎಲ್ಲರೂ ಒಟ್ಟಾಗಿ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

Comments

Leave a Reply

Your email address will not be published. Required fields are marked *