ಸರ್ಕಾರ ಉರುಳಿಸಲು ಮೋದಿ ಯತ್ನಿಸುತ್ತಿಲ್ಲ- ಮಾಜಿ ಪ್ರಧಾನಿ ಎಚ್‍ಡಿಡಿ

ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಮೈತ್ರಿಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರ ಇದೆ ಎಂದು ಅನಿಸುತ್ತಿಲ್ಲವೆಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಮೂರು ದಿನ ಸಿಎಂ ಆಗಿದ್ದರಿಂದ ಯಡಿಯೂರಪ್ಪನವರಿಗೆ ನೋವು ಆಗಿದೆ. ಅದೇ ನೋವಲ್ಲಿ ನಮ್ಮ ಸರ್ಕಾರವನ್ನು ಬೀಳಿಸಲು ಯತ್ನ ಮಾಡ್ತಿದ್ದಾರೆ. ಸರ್ಕಾರ ಉರುಳಿಸೋ ಯತ್ನದಲ್ಲಿ ಮೋದಿ ಪಾತ್ರ ಇದೆ ಅಂತ ಅನಿಸಲ್ಲ. ಆದ್ರೆ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರಿಂದ ಯತ್ನಿಸುತ್ತಿದ್ದಾರೆ ಎಂದು ಅವರು ಗರಂ ಆಗಿದ್ದಾರೆ.

 

ಅಧಿವೇಶನದಲ್ಲೇ ಮೈತ್ರಿ ಸರ್ಕಾರವನ್ನ ಉರುಳಿಸಲು ಬಿಜೆಪಿ ತಂತ್ರಗಾರಿಕೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಜೊತೆಗೆ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ಮನೆಗೆ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಬಜೆಟ್ ಅಧಿವೇಶನ ವೇಳೆಯೇ ಅತೃಪ್ತ ಶಾಸಕರು ಗೈರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಒಂದು ವೇಳೆ ಶಾಸಕರು ಗೈರಾದ್ರೆ ಏನ್ ಮಾಡಬೇಕು ಅನ್ನೋದರ ಬಗ್ಗೆ ಚರ್ಚೆ ನಡೆಸಲಾಗಿದೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

ಬಾಗೂರು ಮಂಜೇಗೌಡ ಆರೋಪ:
ಕಾಂಗ್ರೆಸ್ ನಾಯಕರ ಸಂಬಂಧಿಕರಿಗೆ ಸಚಿವ ಎಚ್‍ಡಿ ರೇವಣ್ಣ ಕಾಡುತ್ತಿದ್ದಾರೆ. ಕಾಂಗ್ರೆಸ್ ಮುಖಂಡರ ಸಂಬಂಧಿಕರಾಗಿರುವ ಸರ್ಕಾರಿ ಅಧಿಕಾರಿಗಳನ್ನು ಹುಡುಕಿ ಹುಡುಕಿ ತೊಂದರೆ ಕೊಡುತ್ತಿದ್ದಾರೆ. ನನ್ನ ಸಹೋದರರಾದ ಇಬ್ಬರು ಆರ್‍ಟಿಒ ಇನ್ಸ್‍ಪೆಕ್ಟರ್‍ಗಳನ್ನು ರೇವಣ್ಣ ವರ್ಗಾಯಿಸಿದ್ದಾರೆ. ಕಾಂಗ್ರೆಸ್ 80 ಸ್ಥಾನ ಗೆದ್ದಿರೋ ಕಾರಣ ಜೆಡಿಎಸ್ ಅಧಿಕಾರದಲ್ಲಿದೆ. ಜೆಡಿಎಸ್ 37 ಸ್ಥಾನ ಗೆದ್ದಿರೋ ಕಾರಣ ಅಧಿಕಾರದಲ್ಲಿಲ್ಲ, ನೆನಪಿರಲಿ ಎಂದು ಹೊಳೆನರಸೀಪುರದಲ್ಲಿ ರೇವಣ್ಣ ವಿರುದ್ಧ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ ಆರೋಪಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *