ಪ್ರಧಾನಿ ಮೋದಿ ವಿರುದ್ಧ ಎಚ್‍ಡಿಡಿ ಗರಂ..!

ಬೆಂಗಳೂರು: ಮಣ್ಣಿನ ಮಗ ಏನು ಮಾಡಿದ್ದಾರೆ ಅಂತ ಪ್ರಶ್ನೆ ಮಾಡಿದ ಪ್ರಧಾನಿ ಮೋದಿ ಅವ್ರಿಗೆ ಉತ್ತರ ಕೊಡ್ತೀನಿ ಅಂತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಗರಂ ಆಗಿದ್ದಾರೆ.

ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಮಣ್ಣಿನ ಮಗ ದೇಶಕ್ಕೆ ಏನು ಮಾಡಿದ್ದಾರೆ ಅಂತ ಮೋದಿ ಲಘುವಾಗಿ ಮಾತಾಡಿದ್ದಾರೆ. ನಾನು ದೆಹಲಿಗೆ ಹೋಗುತ್ತಾ ಇದ್ದೇನೆ. ಮಣ್ಣಿನ ಮಗ ಏನ್ ಮಾಡಿದ್ದಾರೆ ಅಂತ ಕೇಳಿದ್ದಾರೆ. ಇದಕ್ಕೆ ಉತ್ತರ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಸಂಸತ್ ನಲ್ಲಿ ಸಮಯ ಸಿಕ್ಕರೆ ಈ ಬಗ್ಗೆ ನಾನು ಮಾತಾಡ್ತೀನಿ. 50 ವರ್ಷ ನಾನು ಏನ್ ಮಾಡಿದ್ದೀನಿ ಅಂತ ಸಂಸತ್ ನಲ್ಲಿ ಉತ್ತರ ಕೊಡ್ತೀನಿ ಅಂತ ಮೋದಿ ವಿರುದ್ಧ ಕಿಡಿಕಾರಿದ್ರು. ಅಧಿವೇಶನ ಮುಗಿದ ಮೇಲೆ ರಾಜ್ಯದಲ್ಲೆ ಇರುತ್ತೇನೆ ಅವರು ನುಡಿದ್ರು.

ಆಡಿಯೋ ಬಗ್ಗೆ ತಪ್ಪು ಒಪ್ಪಿಕೊಂಡ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ನಿರಾಕರಿಸಿದ್ದಾರೆ. ಆಡಿಯೋ ಬಗ್ಗೆ ನಾನು ಯಾವುದೇ ರಿಯಾಕ್ಷನ್ ಕೊಡೋದಿಲ್ಲ. ಆಡಿಯೋ ಮಾಡಿರೋರು ಯಾರು, ಅದಕ್ಕೆ ಯಾರು ಕಾರಣ ಇದೆಲ್ಲ ನನಗೆ ಸಂಬಂಧ ಇಲ್ಲ. ನಾನು ಪ್ರತಿಕ್ರಿಯೆ ಕೊಡೋದು ಯೋಗ್ಯ ಅಲ್ಲ. ಅದಕ್ಕೆ ನಾನು ರಿಯಾಕ್ಷನ್ ಕೊಡೊಲ್ಲ ಅಂತ ನಿರಾಕರಣೆ ಮಾಡಿದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *