ದೀಪಕ್ ರಾವ್ ಮನೆಗೆ ಎಚ್‍ಡಿಡಿ ಭೇಟಿ-ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಮಾಜಿ ಪ್ರಧಾನಿ

ಮಂಗಳೂರು: ಕಾಟಿಪಳ್ಳದಲ್ಲಿ ಜನವರಿ 3 ರಂದು ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಮನೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಂದು ಭೇಟಿ ನೀಡಿದರು.

ಮಂಗಳೂರಿನ ಕಾಟಿಪಳ್ಳದಲ್ಲಿರುವ ಮನೆಯಲ್ಲಿ ದೀಪಕ್ ರಾವ್ ಅವರ ತಾಯಿ ಪ್ರೇಮಾರವರ ಪರಿಸ್ಥಿತಿ ಕಂಡು ದುಖಿಃತರಾದ ದೇವೇಗೌಡ ಅವರು, ದೀಪಕ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಎಚ್‍ಡಿಡಿ ಅವರಿಗೆ ಜೆಡಿಎಸ್ ಮುಖಂಡರಾದ ಬಿ.ಎಂ. ಫಾರೂಕ್, ಮಹಮ್ಮದ್ ಕುಂಞÂ ಸಾಥ್ ನೀಡಿದರು.

ದೀಪಕ್ ಕೊಲೆಯಾದ ಬಳಿಕ ದುಷ್ಕರ್ಮಿಗಳಿಂದ ಹತ್ಯೆಯಾದ ಬಶೀರ್ ಅವರ ಮಂಗಳೂರಿನ ಆಕಾಶ ಭವನದಲ್ಲಿರುವ ಮನೆಗೂ ಎಚ್‍ಡಿಡಿ ನಾಳೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.

Comments

Leave a Reply

Your email address will not be published. Required fields are marked *