ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ದುರ್ಮರಣ

ಹಾಸನ: ತಡರಾತ್ರಿ ಜವರಾಯನ ಅಟ್ಟಹಾಸ ಮೆರೆದಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ (Channarayapatna) ತಾಲೂಕಿನ ಕೆರೆಹಳ್ಳಿ ಬಳಿ ನಡೆದ ದುರಂತದಲ್ಲಿ ಲೋಕೇಶ್, ಲಕ್ಷ್ಮಿ ಹಾಗೂ ಲೋಕೇಶ್ ತಂಗಿಯ ಮಕ್ಕಳಾದ ಗಾನವಿ ಮತ್ತು ಲೇಖನ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಬದುಕಿದ್ದಾಗ ಶಕ್ತಿ ಮೀರಿ ಪ್ರಯತ್ನಿಸಿದ್ರೂ ಆಗ್ಲಿಲ್ಲ – ಸಾವನ್ನಪ್ಪಿದ 65 ದಿನಗಳ ಬಳಿಕ ನರ್ಸ್ ವರ್ಗಾವಣೆ!

ನಡೆದಿದ್ದೇನು..?: ಲೋಕೇಶ್ ಅವರು ಹೊಸೂರಿನಿಂದ ಪತ್ನಿಯನ್ನು ಕರೆದುಕೊಂಡು ನವಿಲೆ ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಲೋಕೇಶ್ ಬೈಕ್ ಕಾರೇಹಳ್ಳಿ ಬಳಿ ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯೊಡೆದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ನುಗ್ಗೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *