ಬಸ್‍ಗಾಗಿ ನಿಂತಿದ್ದವರ ಮೇಲೆ ಹರಿದ ಕಾರ್ – ನಾಲ್ವರ ದುರ್ಮರಣ

ಮುಂಬೈ: ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ವೇಗವಾಗಿ ಬಂದ ಕಾರ್, ಹರಿದ ಪರಿಣಾಮ 16 ವರ್ಷದ ಹುಡುಗ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 5 ಮಂದಿಗೆ ಗಾಯವಾಗಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.

ಇಂದು ಮುಂಜಾನೆ ಥಾಣೆಯ ಶಾಹಪುರದಲ್ಲಿ ಈ ಘಟನೆ ಸಂಭವಿಸಿದೆ. ಕಿಹ್ನಾವಳಿ ಸೇತುವೆ ಬಳಿ ಇಂದು ಮುಂಜಾನೆ ಸುಮಾರು 7 ಗಂಟೆಗೆ ಮೃತರು ಮತ್ತು ಗಾಯಗೊಂಡವರು ನಾಶಿಕ್ ಗೆ ಹೋಗಲು ಸಾರಿಗೆ ವಾಹನಕ್ಕಾಗಿ ಕಾಯುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರ್, ನಿಂತಿದ್ದವರ ಮೇಲೆ ಏಕಾಏಕಿ ಹರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೊಡಲೇ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಪಘಾತದ ರಭಸಕ್ಕೆ ಸ್ಥಳದಲ್ಲಿಯೇ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರು ಅಪ್ರಾಪ್ತರು ಮತ್ತು ದಂಪತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಾಹಪುರ್ ಗ್ರಾಮೀಣ ಆಸ್ಪತ್ರೆಯಿಂದ ಥಾಣೆಯ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳ್ಕಕೆ ಸ್ಥಳೀಯ ಶಾಸಕ ಪಾಂಡುರಾಂಗ್ ಬರೋರಾ ಭೇಟಿ ನೀಡಿದ್ದು, ಅಪಘಾತವಾದಲ್ಲಿ ಕಾರ್ ಡಿಕ್ಕಿ ಹೊಡೆದ ಬಳಿಕ ಕೆಲವರು ಸೇತುವೆಯಿಂದ ಕೆಳಗೆ ಬಿದ್ದಿದ್ದಾರೆ ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *