ವಿಷ ಆಹಾರ ಸೇವನೆ – ಒಂದೇ ಕುಟುಂಬದ ನಾಲ್ವರ ದುರ್ಮರಣ

ಚಿತ್ರದುರ್ಗ: ವಿಷಪೂರಿತ ಆಹಾರ ಸೇವನೆ ಮಾಡಿದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಹುಲಿತೊಟ್ಲು ಗ್ರಾಮದಲ್ಲಿ ನಡೆದಿದೆ.

ಚಿತ್ತಪ್ಪ(80), ಶಶಿಧರ್ (40), ಹೇಮಾಲತಾ(30) ಮತ್ತು ಭಾಗ್ಯಮ್ಮ (35) ಮೃತ ದುರ್ದೈವಿಗಳು. ಮೃತರು ಒಂದೇ ಕುಟುಂಬದ ಅಪ್ಪ ಹಾಗೂ ಮೂವರು ಮಕ್ಕಳು. ಇನ್ನುಳಿದ ಮೂವರು ಸ್ಥಿತಿ ಗಂಭೀರವಾಗಿದ್ದು, ಅವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ರಾತ್ರಿ ಒಂದೇ ಕುಟುಂಬದ ಏಳು ಮಂದಿ ಮುದ್ದೆ ಮತ್ತು ಅವರೆಕಾಳು ಸಾರು ಊಟ ಮಾಡಿದ್ದಾರೆ. ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚಿತ್ತಪ್ಪ, ಶಶಿಧರ್, ಹೇಮಾಲತಾ ಮತ್ತು ಭಾಗ್ಯಮ್ಮ ನಾಲ್ವರು ಮೃತಪಟ್ಟಿದ್ದಾರೆ.

ತೀವ್ರ ಅಸ್ವಸ್ಥಗೊಂಡ ಸದಾನಂದ (13) ಮುದ್ದುರಾಜ್ (14) ಮತ್ತು ಅಜಯ್ (14)ಗೆ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಈ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಘಟನೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಐಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *