ಸ್ನೇಹಿತನೊಂದಿಗೆ ಬಿಯರ್ ಕುಡಿಯಲು ಹೋದವ ಶವವಾದ

ಮೈಸೂರು: ಪಾರ್ಟಿ ಮಾಡಲೆಂದು ಸ್ನೇಹಿತನ ಜೊತೆ ಮನೆ ಬಿಟ್ಟು ಹೋದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮನೋಜ್ ಕುಮಾರ್ ಮೃತ ದುರ್ದೈವಿ. ತಗಡೂರು ಗ್ರಾಮದ ನಿವಾಸಿ ಮನೋಜ್ ಕುಮಾರ್, ಗುರುವಾರ ಸಂಜೆ ಸ್ನೇಹಿತ ವಿಜಯ್ ಕುಮಾರ್ ಜೊತೆ ಬೈಕಿನಲ್ಲಿ ತೆರಳಿದ್ದ. ಇದೀಗ ನಾಲೆಯ ತೂಬಿನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಸೋನಹಳ್ಳಿ ಗ್ರಾಮದ ತಗಡೂರು ರಾಮಚಂದ್ರರಾವ್ ನಾಲೆ ಬಳಿ ಇಬ್ಬರೂ ಬಿಯರ್ ಕುಡಿಯುತ್ತಿದ್ದರು. ಬಿಯರ್ ಪಾರ್ಟಿಗೆ ಇಬ್ಬರು ಅಪರಿಚಿತರು ಸೇರಿಕೊಂಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟವಾಗಿ ವಿಜಯ್ ಕುಮಾರ್ ಬೈಕನ್ನು ನಾಲೆಗೆ ತಳ್ಳಿದ್ದು, ನಂತರ ಅಲ್ಲಿಂದ ಪರಾರಿಯಾಗಿದ್ದಾನೆ.

ಸ್ವಲ್ಪ ಸಮಯದ ನಂತರ ಹಿಂದಿರುಗಿ ಬಂದಾಗ ಮನೋಜ್ ಕುಮಾರ್ ಕೂಡ ಅಲ್ಲಿ ಇರಲಿಲ್ಲ. ಆಗ ವಿಜಯಕುಮಾರ್, ಮನೋಜ್ ಕುಮಾರ್ ಪೋಷಕರಿಗೆ ಸುದ್ದಿ ಮುಟ್ಟಿಸಿದ್ದಾನೆ. ನಾಲೆ ಬಳಿ ಹುಡುಕಾಡಿದಾಗ ಮನೋಜ್ ಶವ ಪತ್ತೆಯಾಗಿದೆ. ಮನೋಜ್‍ನ ಕಿವಿ, ಮರ್ಮಾಂಗ ಹಾಗೂ ಹುಬ್ಬುಗಳ ಮೇಲೆ ಗಾಯವಾಗಿದ್ದು, ಪೋಷಕರು ಕೊಲೆ ಆರೋಪದ ದೂರು ದಾಖಲಿಸಿದ್ದಾರೆ.

ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *