ಗಜ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಮೂರು ದಿನ ಧಾರಾಕಾರ ಮಳೆ

ಬೆಂಗಳೂರು: ಗಜ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರದ ಕುಸಿತದಿಂದಾಗಿ ‘ಗಜ’ ಚಂಡಮಾರುತ ಸೃಷ್ಟಿಯಾಗಿದೆ. ಇದರ ಪರಿಣಾಮವಾಗಿ ಗುರುವಾರ ಮತ್ತು ಶುಕ್ರವಾರ ಚೆನ್ನೈ ಮತ್ತು ಕೇರಳದಲ್ಲಿ ಮಹಾಮಳೆಯಾಗಲಿದೆ. ಹವಾಮಾನ ಇಲಾಖೆಯ ಮಾಹಿತಿಗಳ ಪ್ರಕಾರ 110 ಮಿ.ಮೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದೇ ಚಂಡಮಾರುತವು ರಾಜ್ಯಕ್ಕೂ ಅಪ್ಪಳಿಸುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದೇ ನವೆಂಬರ್ 17ರಿಂದ ರಾಜ್ಯದ ಕರಾವಳಿ ಭಾಗಗಳಿಗೆ ಗಜ ಚಂಡಮಾರುತ ಅಪ್ಪಳಿಸಲಿದೆ. ಮಾಹಿತಿಗಳ ಪ್ರಕಾರ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ನವೆಂಬರ್ 18 ರಿಂದ 21 ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುತ್ತದೆ. ಇದರಿಂದಾಗಿ ಮೂರು ದಿನಗಳ ಕಾಲ ರಾಜ್ಯದಲ್ಲಿ ಎಡೆಬಿಡದೇ ಮಳೆಯಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *