ರಾಮನಿಂದ ರಾವಣ, ಕೃಷ್ಣನಿಂದ ಕಂಸ, ಇದೀಗ ಮೋದಿಯಿಂದ ಮಸೂದ್ ಸಂಹಾರ: ಮಹಾಭಾರತ ನಟ

ಮುಂಬೈ: ರಾಮನಿಂದ ರಾವಣ, ಕೃಷ್ಣನಿಂದ ಕಂಸ, ಇದೀಗ ಪ್ರಧಾನಿ ಮೋದಿಯಿಂದ ಉಗ್ರ ಮಸೂದ್ ಅಜರ್ ನ ಸಂಹಾರ ಎಂದು ಮಹಾಭಾರತ ಧಾರಾವಾಹಿಯ ನಟ ಗಜೇಂದ್ರ ಸಿಂಗ್ ಚೌಹಾಣ್ ಹೇಳಿದ್ದಾರೆ.

ವಾಯುಪಡೆ ಪಾಕಿಸ್ತಾನದಲ್ಲಿರುವ ಉಗ್ರರ ತರಬೇತಿ ಶಿಬಿರಗಳನ್ನು ಧ್ವಂಸಗೊಳಿಸಿದ ಖುಷಿಯನ್ನು ಹಂಚಿಕೊಂಡಿದ ಹಾಸ್ಯ ನಟ ರಾಜು ಶ್ರೀವಾತ್ಸವ್, ಈಗಾಗಲೇ 370 ಉಗ್ರರನ್ನು ಹೊಡೆದುರುಳಿಸಲಾಗಿದೆ. ಉತ್ತರ ಪ್ರದೇಶ ಮತ್ತು ಬಿಹಾರನಿಂದ ನಾಲ್ಕೈದು ರೈಲುಗಳನ್ನು ಬಿಟ್ಟರೇ ನಮ್ಮವರೇ ಅಲ್ಲಿನ ಪರಿಸ್ಥಿತಿಯನ್ನು ನಿಭಾಯಿಸಬಲ್ಲರು. ಅಲ್ಲಿರುವ ಉಗ್ರರನ್ನು ನಾಶ ಮಾಡುವ ಸಾಮಥ್ರ್ಯವನ್ನು ನಮ್ಮವರು ಹೊಂದಿದ್ದಾರೆ.

ಪುಲ್ವಾಮಾದಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಆತ್ಮಾಹುತಿ ಬಾಂಬರ್ ಆದಿಲ್ ನಡೆಸಿದ ದಾಳಿಯಲ್ಲಿ 44 ಯೋಧರು ಹುತಾತ್ಮರಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕಾರವಾಗಿ ಫೆ.26ರಂದು ಗಡಿ ನಿಯಂತ್ರಣ ರೇಖೆ ದಾಟಿ ಉಗ್ರರ ನೆಲೆಗಳಾದ ಬಾಲಕೋಟ್, ಮುಜಾಫರ್ ಬಾದ್ ಮತ್ತು ಚಿಕೋಟಿಯಲ್ಲಿಯ ಶಿಬಿರಗಳನ್ನು ಧ್ವಂಸಗೊಳಿಸಿದ್ದರು. ಪುಲ್ವಾಮಾ ದಾಳಿಯಾದ 12ನೇ ದಿನಕ್ಕೆ ಪ್ರತಿಕಾರವನ್ನು ಭಾರತ ತೀರಿಸಿಕೊಂಡಿತ್ತು.

ಬಾಲಕೋಟ್ ನಲ್ಲಿ ಮೂರು ತಿಂಗಳು ತರಬೇತಿ ಪಡೆದುಕೊಂಡ ಉಗ್ರರು ಭಾರತ ಪ್ರವೇಶಿಸಿ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ಗನ್ ಹಿಡಿಯುವುದು ಸೇರಿದಂತೆ ಪ್ರಾಥಮಿಕ ತರಬೇತಿ ಪಡೆದ ಉಗ್ರರನ್ನು ಬಾಲಕೋಟ್ ಗೆ ರವಾನಿಸಲಾಗುತ್ತಿತ್ತು ಬಾಲಕೋಟ್ ನಲ್ಲಿ ಉಗ್ರರಿಗೆ ಎಕೆ-47, ಪಿಕಾ, ಎಲ್‍ಎಂಜಿ, ರಾಕೆಟ್ ಉಡಾವಣೆ, ಯುಬಿಜಿಎಲ್ ಮತ್ತು ಗ್ರೆನೆಡ್ ಬಳಕೆಯ ತರಬೇತಿಯನ್ನು ನೀಡಲಾಗುತ್ತಿತ್ತು. ಇದೇ ವೇಳೆ ಈಜು, ಕುದುರೆ ಸವಾರಿ ಮತ್ತು ಕತ್ತಿ ವರಸೆಯನ್ನು ಕಲಿಸಲಾಗುತ್ತಿತ್ತು. ಈ ಉಗ್ರರ ತರಬೇತಿ ಶಿಬಿರವನ್ನು ‘ಮದ್ರಸಾ ಆಯೇಷಾ ಸಾದಿಕ್’ ಹೆಸರಿನಲ್ಲಿ ನಿರ್ವಹಣೆ ಮಾಡಲಾಗುತ್ತಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *