ಗಣೇಶ ವಿಸರ್ಜನೆ ವೇಳೆ ಡಿಜೆ ಆಫ್ ಮಾಡಿ ಎಂದ ಪೊಲೀಸರು – ಯುವಕರಿಂದ ಕಲ್ಲು ತೂರಾಟ

ಚಾಮರಾಜನಗರ: ಗಣೇಶನ ಮೂರ್ತಿ ವಿಸರ್ಜನೆ (Ganesha Procession) ಸಂದರ್ಭದಲ್ಲಿ ಡಿಜೆ (DJ) ಆಫ್ ಮಾಡಿ ಎಂದಿದ್ದಕ್ಕೆ ಕೋಪಗೊಂಡ ಯುವಕರು ಪೊಲೀಸರ (Police) ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಚಾಮರಾಜನಗರದ (Chamarajanagar) ಉಪ್ಪಾರ ಬೀದಿಯಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ

ಸಂತೇಮರಹಳ್ಳಿ ವೃತ್ತದ ಸಮೀಪ ಇರುವ ಗಣಪತಿಯನ್ನು ಭಾನುವಾರ ವಿರ್ಸಜನೆಗಾಗಿ ಮೆರವಣಿಗೆ ಮಾಡಲಾಗುತ್ತಿತ್ತು, ರಾತ್ರಿ 11 ಗಂಟೆ ಆದರೂ ಡಿಜೆ ಆಫ್ ಮಾಡದೇ ಯುವಕರು ಮೆರವಣಿಗೆಯಲ್ಲಿ ಕುಣಿಯುತ್ತಿದ್ದರಿಂದ ಪೊಲೀಸರು ಡಿಜೆ ಆಫ್ ಮಾಡಿ ಎಂದಿದ್ದಾರೆ. ಇದರಿಂದ ಕುಪಿತಗೊಂಡ ಮಹೇಂದ್ರ, ನಾಗೇಶ್, ಮಹೇಶ್, ಮುರುಗೇಶ್ ಸೇರಿದಂತೆ 15ಕ್ಕೂ ಹೆಚ್ಚು ಯುವಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದನ್ನೂ ಓದಿ: ಕೆಮ್ಮುತ್ತಲೇ ವಿಚಾರಣೆಗೆ ಹಾಜರಾದ ಡಿ.ಕೆ ಶಿವಕುಮಾರ್

ಘಟನೆಯಲ್ಲಿ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆ ಪಿಎ ಮಹಾದೇವ್ ಸೇರಿದಂತೆ ಎಎಸ್‍ಪಿ ಶಿವಶಂಕರ್, ಚಾಲಕ ಬಸವರಾಜು ಎಂಬುವರ ಕಾಲು, ಕೈಗಳಿಗೆ ಗಾಯಗಳಾಗಿದೆ. ಘಟನೆ ಸಂಬಂಧ ಎಎಸ್‍ಪಿ ಶಿವಶಂಕರ್ ದೂರು ನೀಡಿದ್ದು, ಇಂದು ಹತ್ತಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಭಾರೀ ಸಾಲದ ಸುಳಿಯಲ್ಲಿ KPTCL, ವಿದ್ಯುತ್‌ ಕಂಪನಿಗಳು: ಯಾವ ಕಂಪನಿಯದ್ದು ಎಷ್ಟು ಸಾಲ?

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *