ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟ: ತಂದೆ-ಮಗ ಸೇರಿ ಮೂವರ ದುರ್ಮರಣ

ಹಾಸನ: ಕಳೆದ ರಾತ್ರಿ ಬಂದ ಭಾರೀ ಮಳೆಗೆ ಕಲ್ಲು ಕ್ವಾರೆಯಲ್ಲಿ ಬಂಡೆ ಸಿಡಿಸಲು ಅಳವಡಿಸಿದ್ದ ಸಿಡಿಮದ್ದಿಗೆ ಸಿಡಿಲು ಬಡಿದು ಮೂವರು ಮೃತಪಟ್ಟ ಘಟನೆ ಹಾಸನ ತಾಲೂಕಿನ ಕಟ್ಟಾಯದ ಬಳಿ ನಡೆದಿದೆ.

ಯದು ಎಂಬವರಿಗೆ ಸೇರಿದ ಕಲ್ಲಿನ ಕ್ವಾರಿಯಲ್ಲಿ ಗುಡುಗು, ಸಿಡಿಲಿನ ಅಬ್ಬರಕ್ಕೆ ಸ್ಫೋಟಗೊಂಡ ಸಿಡಿಮದ್ದಿಗೆ ಜಗದೀಶ(50), ಮಗ ಪುನೀತ್ (23), ನಾಗ (40) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಗ ಮುಡಲೂಕೊಪ್ಪ ಗ್ರಾಮದ ನಿವಾಸಿ.

ಈ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *