ತೆಲುಗು ಚಿತ್ರರಂಗಕ್ಕೆ ನೀವು ರತ್ನ: ಜೂನಿಯರ್ ಎನ್‍ಟಿಆರ್ ಹಾಡಿ ಹೊಗಳಿದ ಅಮಿತ್ ಶಾ

ಹೈದರಾಬಾದ್: ತೆಲುಗು ಚಿತ್ರರಂಗದಲ್ಲಿ ನೀವೊಂದು ರತ್ನ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್‍ಟಿಆರ್ ಅವರನ್ನು ಹಾಡಿಹೊಗಳಿದ್ದಾರೆ.

ಭಾನುವಾರ ಹೈದರಾಬಾದ್‍ನಲ್ಲಿ ಜೂನಿಯರ್ ಎನ್‍ಟಿಆರ್ ಅವರನ್ನು ಅಮಿತ್ ಶಾ ಭೇಟಿಯಾದರು. ಇದೇ ವೇಳೆ ಜೂ.ಎನ್‍ಟಿಆರ್ ಅವರನ್ನು ತೆಲುಗು ಚಿತ್ರರಂಗಕ್ಕೆ ನೀವೊಂದು ರತ್ನ ಮತ್ತು ಅಪ್ರತಿಮ ಪ್ರತಿಭಾವಂತ ನಟ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಯುಪಿಐ ಪಾವತಿಗಳಿಗೆ ಯಾವುದೇ ಶುಲ್ಕ ವಿಧಿಸಲ್ಲ: ಕೇಂದ್ರ ಸರ್ಕಾರ

ಜೂನಿಯರ್ ಎನ್‍ಟಿಆರ್ ಅವರೊಂದಿಗೆ ಕುಳಿತುಕೊಂಡು ಸಂವಾದ ನಡೆಸುತ್ತಿರುವ ಫೋಟೋಗಳನ್ನು ಅಮಿತ್ ಶಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಬಹಳ ಪ್ರತಿಭಾವಂತ ನಟ ಮತ್ತು ನಮ್ಮ ತೆಲುಗು ಚಿತ್ರದ ರತ್ನವಾಗಿರು ಜೂನಿಯರ್ ಎನ್‍ಟಿಆರ್ ಜೊತೆಗೆ ಹೈದರಾಬಾದ್‍ನಲ್ಲಿ ಸಂಭಾಷಣೆ ನಡೆಸುತ್ತಿದ್ದೇನೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮಂಗಳೂರು ಹೈವೇಯಲ್ಲಿ ಕಾಡಾನೆ ಪ್ರತ್ಯಕ್ಷ

ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸ್ಥಾಪಕ ಎನ್‍ಟಿ ರಾಮರಾವ್ ಅವರ ಮೊಮ್ಮಗ ಆಗಿರುವ ನಟ ಜೂನಿಯರ್ ಎನ್‍ಟಿಆರ್ ಅವರನ್ನು ಬಿಜೆಪಿ ನಾಯಕರು ಭಾನುವಾರ ಸಂಜೆ ಅಮಿತ್ ಶಾ ಅವರೊಂದಿಗೆ ಔತಣಕೂಟಕ್ಕೆ ಆಹ್ವಾನಿಸಿದ್ದರು. ಅವರ ತಂದೆ ನಂದಮೂರಿ ಹರಿಕೃಷ್ಣ ಅವರು 2008 ರಿಂದ 2013 ರವರೆಗೆ ಟಿಡಿಪಿ ರಾಜ್ಯಸಭಾ ಸದಸ್ಯರಾಗಿದ್ದರು, ಅವರ ಚಿಕ್ಕಪ್ಪ ಮತ್ತು ನಟ ನಂದಮೂರಿ ಬಾಲಕೃಷ್ಣ ಆಂಧ್ರಪ್ರದೇಶದ ಟಿಡಿಪಿ ಶಾಸಕರಾಗಿದ್ದಾರೆ.

ನಂದಮೂರಿ ತಾರಕ ರಾಮರಾವ್ ಜೂನಿಯರ್ (ಜೂ.ಎನ್‍ಟಿಆರ್) ಅತ್ಯಂತ ಜನಪ್ರಿಯ ಭಾರತೀಯ ನಟರಾಗಿದ್ದು, ಇತ್ತೀಚೆಗಷ್ಟೇ ನಟ ರಾಮ್‍ಚರಣ್ ಹಾಗೂ ಜೂ.ಎನ್‍ಟಿಆರ್ ಅಭಿನಯಿಸಿದ್ದ ಆರ್‌ಆರ್‌ಆರ್ ಸಿನಿಮಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿತ್ತು.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *