ಮದ್ವೆಗೆ 2 ತಿಂಗಳು ಇದ್ದಾಗಲೇ ಯುವತಿ ನೇಣಿಗೆ ಶರಣು!

ಬೆಂಗಳೂರು: ಮದುವೆ ನಿಶ್ಚಯವಾಗಿದ್ದ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಯಾರಂಡಹಳ್ಳಿಯಲ್ಲಿ ನಡೆದಿದೆ.

ಕೋಲಾರದ ಮುಳಬಾಗಿಲು ಮೂಲದ 20 ವರ್ಷದ ಭವ್ಯ ಆತ್ಮಹತ್ಯೆಗೆ ಶರಣಾದ ಯುವತಿ. ಭವ್ಯ ಅವರಿಗೆ ಮದುವೆ ನಿಶ್ಚಯವಾಗಿದ್ದು, ಇನ್ನೆರಡು ತಿಂಗಳಲ್ಲಿ ಮದುವೆ ಕೂಡ ನಡೆಯಬೇಕಿತ್ತು. ಆದರೆ ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಭವ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಭವ್ಯ ಅವರಿಗೆ ಹೊಟ್ಟೆ ನೋವಿನ ಸಮಸ್ಯೆ ಇದ್ದುದರಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಕುರಿತು ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *