ನಾಲ್ವರು ದುಷ್ಕರ್ಮಿಗಳಿಂದ ಬಾಲಕಿಗೆ ಚಾಕು ಇರಿತ!

ದಾವಣಗೆರೆ: ಮನೆಯಲ್ಲಿ ಯಾರು ಇಲ್ಲದ ವೇಳೆ ನೀರು ಕೇಳಲು ಹೋಗಿ ನಾಲ್ವರು ದುಷ್ಕರ್ಮಿಗಳು ಬಾಲಕಿಗೆ ಚಾಕುವಿನಿಂದ ಇರಿದ ಘಟನೆ ಜಿಲ್ಲೆಯ ಹೆಚ್.ಕೆ.ಆರ್ ನಗರದಲ್ಲಿ ನಡೆದಿದೆ.

ಗುರುವಾರ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ತಂದೆ-ತಾಯಿ ಕೆಲಸಕ್ಕೆ ಹೋಗಿದ್ದ ಸಂದರ್ಭವನ್ನು ಬಳಸಿಕೊಂಡ ನಾಲ್ಕು ಮಂದಿ ದುಷ್ಕರ್ಮಿಗಳು ಮೊದಲು ಬಾಗಿಲು ಬಡಿದಿದ್ದಾರೆ. ಬಾಗಿಲು ತೆಗೆಯುತ್ತಿದ್ದಂತೆ ಬಾಲಕಿಯ ಕುತ್ತಿಗೆಗೆ ಚಾಕು ಹಾಕಲು ಮುಂದಾಗಿದ್ದಾರೆ.

ಈ ವೇಳೆ ಬಾಲಕಿ ಕೈ ಅಡ್ಡ ತಂದಿದ್ದಕ್ಕೆ ಚಾಕು ಕೈಗೆ ಬಿದ್ದಿದೆ. ತಕ್ಷಣಕ್ಕೆ ಬಾಲಕಿ ಕಿರುಚಿಕೊಂಡಿದ್ದರಿಂದ ನಾಲ್ವರು ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಅಲ್ಲದೆ ಬಾಲಕಿಯನ್ನ ತಕ್ಷಣಕ್ಕೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ದುಷ್ಕರ್ಮಿಗಳು ಬುರ್ಕಾ ಹಾಕಿಕೊಂಡು ಬಂದಿದ್ದರಿಂದ ಮುಖದ ಚಹರೆ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಅಲ್ಲದೆ ಜಿಲ್ಲೆಯಲ್ಲಿ ಮಕ್ಕಳು ಕಳ್ಳರ ಹಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವುದರಿಂದ, ಮಕ್ಕಳ ಕಳ್ಳರೇ ಇರಬಹುದು ಎಂದು ಪೋಷಕರು ಹಾಗೂ ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಆರ್ ಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *