‘ಕಾಂತಾರ 2’ ಸಿನಿಮಾ ಮಾಡಲು ಪಂಜುರ್ಲಿ ದೈವದಿಂದ ಸಿಕ್ತು ಅನುಮತಿ

ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ಕಾಂತಾರ 2 ಬರುತ್ತಾ ಎನ್ನುವ ಅನುಮಾನ ಎಲ್ಲರಲ್ಲಿತ್ತು. ದೈವಗಳ ಕುರಿತು ಸಿನಿಮಾ ಮಾಡಲು ಕೆಲವರು ಆಕ್ಷೇಪವನ್ನೂ ವ್ಯಕ್ತ ಪಡಿಸಿದ್ದರಿಂದ ‘ಕಾಂತಾರ 2’ ಬಗ್ಗೆ ಸಹಜವಾಗಿಯೇ ಕುತೂಹಲ ಕೂಡ ಮೂಡಿತ್ತು. ಹಾಗಾಗಿಯೇ ರಿಷಬ್ ಶೆಟ್ಟಿ ಪಂಜುರ್ಲಿ ದೈವದ ಮೊರೆ ಹೋಗಿದ್ದರು. ದೈವ ಹಲವು ಷರತ್ತುಗಳೊಂದಿಗೆ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.

ಮಂಗಳೂರು ನಗರ ಹೊರವಲಯದ ಬಂದಲೆಯ ಮನೆಯಲ್ಲಿ ನಡೆದ  ಪಂಜುರ್ಲಿ ಕೋಲದಲ್ಲಿ ಕಾಂತಾರ ಸಿನಿಮಾದ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರ್, ನಾಯಕಿ ಗೌತಮಿ ಗೌಡ ಸೇರಿದಂತೆ ಬಹುತೇಕ ಸದಸ್ಯರು ಹಾಜರಿದ್ದರು. ಕದ್ರಿ ಮಂಜುನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಅಡಿಗ ಅವರ ನೇತೃತ್ವದಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ಕೋಲಾದಲ್ಲಿ ಕಾಂತರ 2 ಸಿನಿಮಾ ಮಾಡುವ ಕುರಿತು ರಿಷಬ್ ಒಪ್ಪಿಗೆ ಕೇಳಿದ್ದರು. ಇದನ್ನೂ ಓದಿ: ಕರ್ನಾಟಕದ ಹುಡುಗಿಯ ಜೊತೆ ಸಲ್ಮಾನ್ ಖಾನ್‌ಗೆ ಪ್ಯಾರ್

ಮಧ್ಯೆರಾತ್ರಿ ನಡೆದ ದೈವದ ಜೊತೆಗಿನ ಮಾತುಕತೆಯಲ್ಲಿ ದೈವ ಹಲವು ಸೂಚನೆಗಳ ಜೊತೆ ಸಿನಿಮಾ ಮಾಡಲು ಅನುಮತಿ ನೀಡಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಿನಿಮಾದ ಕಥೆ ಮಾಡಲು ರಿಷಬ್ ಶೆಟ್ಟಿ ಅಂಡ್ ಟೀಮ್ ಹುರುಪಿನಿಂದಲೇ ತಯಾರಾಗಿದೆ. ಈ ಕುರಿತು ಚಿತ್ರತಂಡ ಅಧಿಕೃತವಾಗಿ ಮಾಹಿತಿ ನೀಡಿದೇ ಇದ್ದರೂ, ಕೋಲದಲ್ಲಿ ಭಾಗವಹಿಸಿದ್ದ ಹಲವರು ಈ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಪಂಜುರ್ಲಿ ದೈವವು ಕೂಡ `ಕಾಂತಾರ 2′ ಮಾಡಲು ಅನುಮತಿ ನೀಡಿದೆ. ಜೊತೆಗೆ ಕೆಲವು ಸಲಹೆ ಮತ್ತು ಎಚ್ಚರಿಕೆಗಳನ್ನ ಕೂಡ ನೀಡಿದೆ. ಪಾರ್ಟ್ 2ನಲ್ಲಿ ಈ ಹಿಂದಿನ ಕಲಾವಿದರೇ ಮುಂದುವರೆಯಲಿದ್ದಾರೆ. ಇನ್ನೂ ಕಾಂತಾರ ಸಿನಿಮಾ ತಂಡದ ಜೊತೆ ರಿಷಬ್ ಕುಟುಂಬ ಕೂಡ ಕೋಲ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *