ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ-ಕೃಷಿ ಚಟುವಟಿಕೆ ಆರಂಭ

ಬೆಂಗಳೂರು: ಕಳೆದೊಂದು ವಾರದಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ರೈತರು ತಮ್ಮ ಭೂಮಿಯಲ್ಲಿ ಕೃಷಿ ಚಟುವಟಿಕೆಗಳನ್ನ ಆರಂಭಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಈ ವರ್ಷ ಪ್ರಾರಂಭದಲ್ಲೇ ಉತ್ತಮ ಮುಂಗಾರು ಮಳೆಯಾಗುತ್ತಿದೆ. ವರುಣರಾಯ ರೈತರಿಗೆ ತನ್ನ ಕೃಪೆ ತೋರಿದ್ದಾನೆ. ಇನ್ನೂ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಕೆರೆ ಕುಂಟೆಗಳಲ್ಲಿ ನೀರು ತುಂಬಿ ಜಾನುವಾರುಗಳಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಿದೆ.

ಉತ್ತಮ ರೀತಿಯಲ್ಲಿ ಮುಂಗಾರು ಮಳೆಯಾಗುತ್ತಿರುವುದರಿಂದ ಈಗಾಗಲೇ ತಾಲೂಕಿನ ರೈತರು ತಮ್ಮ ಫಲವತ್ತಾದ ಭೂಮಿಯನ್ನ ಉಳುಮೆ ಮಾಡಿ ಬಿತ್ತನೆಗೆ ಮುಂದಾಗಿದ್ದಾರೆ. ಈ ಬಾರಿ ಉತ್ತಮ ಮಳೆಯಿಂದ ಒಳ್ಳೆಯ ಫಸಲು ಕೈ ಸೇರುತ್ತೆ ಎಂಬ ನಂಬಿಕೆಯಲ್ಲಿ ರೈತರಿದ್ದಾರೆ.

 

Comments

Leave a Reply

Your email address will not be published. Required fields are marked *