ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (Caste Census) ಮಾಡಲು ಸರಿಯಾಗಿ ತರಬೇತಿ ಕೊಡದೇ ಸರ್ಕಾರ ಸಮೀಕ್ಷೆಯನ್ನ ಗೊಂದಲ ಮಾಡಿದೆ ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)ಕಿಡಿಕಾರಿದ್ದಾರೆ.
ಸಮೀಕ್ಷೆ ಗೊಂದಲದ ಬಗ್ಗೆ ಜೆಪಿ ಭವನದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ದೊಡ್ಡ ಗೊಂದಲ ಆಗಿದೆ. ಸಮೀಕ್ಷೆಯ ಆಪ್ ಸರಿಯಾಗಿ ವರ್ಕ್ ಆಗುತ್ತಿಲ್ಲ. ಬೆಂಗಳೂರಿನಲ್ಲಿ ದೊಡ್ಡ ದೊಡ್ಡ ಟ್ಯಾಲೆಂಟ್ ಇರೋ ಪ್ರತಿಭಾವಂತರು ಇದ್ದಾರೆ. ಆದರೂ ಸರ್ಕಾರ (Congress) ಸರಿಯಾಗಿ ಆಪ್ ಮಾಡಿಲ್ಲ. ಸರ್ಕಾರದವರು 1.43 ಕೋಟಿ ಮನೆ ಸರ್ವೆ ಅಂತಿದ್ದಾರೆ. ಈವರೆಗೂ ಸಮೀಕ್ಷೆಯವರು ಎಷ್ಟು ಮನೆಗೆ ತಲುಪಿದ್ದಾರೆ? ಈವರೆಗೂ 4 ಲಕ್ಷ ಮನೆ ಮಾತ್ರ ತಲುಪಿದ್ದಾರೆ. 15 ದಿನಗಳಲ್ಲಿ ಸಮೀಕ್ಷೆ ಮಾಡಿ ವರದಿ ಕೊಡೋಕೆ ಆಗುತ್ತಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡಿದೆ: ನಿಖಿಲ್ ಕುಮಾರಸ್ವಾಮಿ
ಶಿಕ್ಷಕರ ರಜೆಯಲ್ಲಿ ಸಮೀಕ್ಷೆ ಮಾಡುತ್ತೇವೆ ಎಂದರು. ಸಮಯ ಮುಗಿದರೂ ಸಮೀಕ್ಷೆ ಮುಗಿದಿಲ್ಲ. ಮತ್ತೆ ಶಿಕ್ಷಕರು ಸಿಗ್ತಾರಾ? 60 ಪ್ರಶ್ನೆ ಮಾಡಿದ್ದೀರಾ. ಅಷ್ಟು ಪ್ರಶ್ನೆ ಕೇಳುವುದರಲ್ಲಿ ಆಪ್ ಹ್ಯಾಂಗ್ ಆಗುತ್ತಿದೆ. ನಿಮ್ಮ ಸಮೀಕ್ಷೆ 15 ದಿನ ಗಡುವು ಮುಗಿಯುತ್ತಿದೆ. ಈಗ 450 ಕೋಟಿ ಅಂತಿದ್ದೀರಾ. ಆಮೇಲೆ 650 ಕೋಟಿ ಮಾಡುತ್ತೀರಿ. ಸರ್ಕಾರ ಶಿಕ್ಷಕರಿಗೆ ಸರಿಯಾಗಿ ಟ್ರೈನಿಂಗ್ ಕೊಟ್ಟಿಲ್ಲ. ಸರ್ಕಾರದವರು ಸರಿಯಾಗಿ ಸಿದ್ಧತೆ ಮಾಡದೇ ಸರ್ವೆ ಮಾಡುತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್ಫಾಸ್ಟ್ ರೈಲು ಘೋಷಣೆ, 30 ವರ್ಷದ ಬೇಡಿಕೆ ಈಡೇರಿಕೆ: ತೇಜಸ್ವಿ ಸೂರ್ಯ
ಹಿಂದೆ 180 ಕೋಟಿ ವೆಚ್ಚದಲ್ಲಿ ಮಾಡಿದ್ದ ಕಾಂತರಾಜು ಸರ್ವೆ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿ ಎಂದು ಇದೇ ವೇಳೆ ಒತ್ತಾಯ ಮಾಡಿದರು. ಇನ್ನು ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸರ್ವೆ ಮಾಡುತ್ತಿದ್ದಾರೆ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಏನೇನು ಆಗುತ್ತೆ ಅಂತ ಮುಂದೆ ನೊಡೋಣ ಬನ್ನಿ ಎಂದರು. ಇದನ್ನೂ ಓದಿ: ಒಡಿಶಾ | 60,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗೆ ಮೋದಿ ಚಾಲನೆ
