ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಅದು ಪಕ್ಷಕ್ಕೆ ಹೇಗೆ ಬರುತ್ತದೆ – ಗೋವಿಂದ ಕಾರಜೋಳ ಪ್ರಶ್ನೆ

ಬೆಳಗಾವಿ: ಲೋಕಾಯುಕ್ತ ಸ್ವತಂತ್ರ ಸಂಸ್ಥೆ ಯಾರನ್ನೂ ಬೇಕಾದರೂ ತನಿಖೆ ನಡೆಸುತ್ತದೆ. ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಅದು ಪಕ್ಷಕ್ಕೆ ಹೇಗೆ ಬರುತ್ತದೆ? ಸಿದ್ದರಾಮಯ್ಯ (Siddaramaiah) ಸುಳ್ಳು ಆರೋಪ ಮಾಡೋದು ಬಿಟ್ಟು ಜೀವನದಲ್ಲಿ ಏನೂ ಸಾಧನೆ ಮಾಡಿಲ್ಲ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ (Govinda Karajola) ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಾಲಿನಲ್ಲಿ ಬಲವಿಲ್ಲದ ಅಂಗವಿಕಲ, ಮಂಗಳೂರಿನ ಯಶಸ್ವಿ ಫುಡ್ ಡೆಲಿವರಿ ಬಾಯ್

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madalu Virupakshappa) ಅವರ ಮಗನ ವಿಚಾರವಾಗಿ ಪ್ರತಿಕ್ರಿಯಿಸಿ, ಅವರ ಬಳಿ 7ಕೋಟಿ ಹಣ ಸಿಕ್ಕ ಬಗ್ಗೆ ನನಗೆ ಮಾಹಿತಿ ಇಲ್ಲ. ಲೋಕಾಯುಕ್ತ ಸ್ವತಂತ್ರ ಸಂಸ್ಥೆ, ನಮ್ಮ ಸರ್ಕಾರ ತನಿಖೆಯಲ್ಲಿ ಮಧ್ಯಪ್ರವೇಶಿಸಲ್ಲ ಎಂದು ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಅಷ್ಟೇ ಅಲ್ಲ ಕಾಂಗ್ರೆಸ್ ಇದಕ್ಕಿಂತ ಹೀನಾಯ ಸ್ಥಿತಿಗೆ ಹೋಗ್ತದೆ. ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ರೆ ಐದು ವರ್ಷ ಅಧಿಕಾರ ನಡೆಸಿ ತಿರುಗಿ ಏಕೆ ಅಧಿಕಾರಕ್ಕೆ ಬರಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನನ್ನ ಕ್ರೀಡಾ ಜೀವನದ ಆರಂಭ ಸುಖಕರವಾಗಿರಲಿಲ್ಲ- ಬೆಳ್ಳಿ ಗೆದ್ದ ಸಹಾನಿ 

Comments

Leave a Reply

Your email address will not be published. Required fields are marked *