ಸಿಬ್ಬಂದಿಯೆದುರೇ ಕೈ ಕೈ ಮಿಲಾಯಿಸಿದ ಗಂಗಾವತಿಯ ಸರ್ಕಾರಿ ಆಸ್ಪತ್ರೆ ವೈದ್ಯರು

ಕೊಪ್ಪಳ: ಸರ್ಕಾರಿ ಆಸ್ಪತ್ರೆಯ ವೈದ್ಯರಿಬ್ಬರು ಗಲಾಟೆ ಮಾಡಿಕೊಂಡು ಕೈ ಮಿಲಾಯಿಸಿದ ಘಟನೆ ಮಂಗಳವಾರ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ಉಪ ವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಈಶ್ವರ್ ಸವದಿ ಮತ್ತು ಇನ್ನೋರ್ವ ಹಿರಿಯ ವೈದ್ಯರಾದ ಡಾ.ಜುಬೇರ್ ಅಹಮ್ಮದ್ ಆಸ್ಪತ್ರೆಯಲ್ಲೆ ಗಲಾಟೆ ಮಾಡಿಕೊಂಡು ಸಾರ್ವಜನಿಕರು ಮತ್ತು ಸಿಬ್ಬಂದಿ ಎದುರೇ ನಗೆಪಾಟಲಿಗೀಡಾಗಿದ್ದಾರೆ.

ಡಾ.ಜುಬೇರ್ ಅಹಮ್ಮದ್ ದಿನ ನಿತ್ಯ ಆಸ್ಪತ್ರೆಗೆ ತಡವಾಗಿ ಬರುತ್ತಿದ್ದು ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿದ ಅಧಿಕಾರಿ ಡಾ.ಈಶ್ವರ್ ಸವಡಿ ಅವರನ್ನು ತಮ್ಮ ಛೇಂಬರ್‍ಗೆ ಕರೆಸಿ, ಸರಿಯಾಗಿ ಕೆಲಸ ನಿರ್ವಹಿಸಿ ಎಂದು ಹೇಳಿದ್ದಾರೆ. ಇದಕ್ಕೆ ಕುಪಿತರಾದ ಡಾ.ಜುಬೇರ್ ನೀವು ಹೇಳಿದ ಹಾಗೆ ಕೇಳಬೇಕೆಂದೇನಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಈ ನಡುವೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ.

ಈ ಇಬ್ಬರು ವೈದ್ಯಾಧಿಕಾರಿಗಳ ಜಗಳ ಆಸ್ಪತ್ರೆ ಸಿಬ್ಬಂದಿ ಮತ್ತು ರೋಗಿಗಳ ಮುಂದೆ ನಡೆದಿದೆ. ವೈದ್ಯಾಧಿಕಾರಿಗಳೇ ಈ ರೀತಿ ಜಗಳ ಮಾಡಿಕೊಂಡರೆ ಆಸ್ಪತ್ರೆಗೆ ಬರುವ ರೋಗಿಗಳನ್ನು ನೋಡುವರು ಯಾರು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *