ಹಳೇ ವೈಷಮ್ಯಕ್ಕೆ ಗ್ರಾ.ಪಂ ಉಪಾಧ್ಯಕ್ಷನ ಕೊಲೆ

ತುಮಕೂರು: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆಯಲ್ಲಿ ನಡೆದಿದೆ.

ಹಂದನಕೆರೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಅಶೋಕ್ (46) ಕೊಲೆಯಾದ ದುರ್ದೈವಿ. ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆಯ ನಿವಾಸಿಯಾದ ಅಶೋಕ್ ಮತ್ತು ಸೋಮಶೇಖರ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಟಾಟಾ ಏಸ್ ವಾಹನವನ್ನು ಹತ್ತಿಸಲಾಗಿದೆ. ಈ ಪರಿಣಾಮ ಅಶೋಕ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಸೋಮಶೇಖರ್ ಅವರಿಗೆ ಗಂಭೀರವಾಗಿ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದರು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪುನೀತ್ ಸಾವಿನ ನಂತರ ಜಯದೇವ ಆಸ್ಪತ್ರೆ ರೋಗಿಗಳಲ್ಲಿ 30% ಹೆಚ್ಚಳ

ಭೀಮಾ ನಾಯ್ಕನ ತಾಂಡಾದಲ್ಲಿ ನಿನ್ನೆ ಮಧ್ಯರಾತ್ರಿ 1 ಗಂಟೆಗೆ ಸುಮಾರಿಗೆ ಈ ಘಟನೆ ನಡೆದಿದ್ದು, ಹಣಕಾಸಿನ ವಿಚಾರಕ್ಕೆ ವೈಷಮ್ಯ ಹೆಚ್ಚಾಗಿ ಈ ಕೃತ್ಯವನ್ನು ನಾಗರಾಜ್ ನಾಯ್ಕ್ ಎಂಬವರು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Comments

Leave a Reply

Your email address will not be published. Required fields are marked *